Advertisement

ಮೃತ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

10:46 PM Feb 29, 2020 | Team Udayavani |

ಬೆಂಗಳೂರು: ಅಕಾಲಿಕವಾಗಿ ನಿಧನರಾಗಿದ್ದ ನಾಲ್ವರು ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂಪ್ಪ ಘೋಷಿಸಿದ್ದಾರೆ. ಶನಿವಾರ ಶಕ್ತಿ ಭವನದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರ ನಿಯೋಗದ ಮನವಿಗೆ ಸ್ಪಂದಿಸಿದ ಅವರು, ನಿಧನ ಹೊಂದಿರುವ ನಾಲ್ವರು ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

Advertisement

ಇತ್ತೀಚೆಗೆ ನಿಧನ ಹೊಂದಿರುವ ರಾಜಕೀಯ ವರದಿಗಾರ ರವಿರಾಜ್‌ ವಳಲಂಬೆ, ಕ್ರೀಡಾ ಪತ್ರಕರ್ತ ದಿಗಂಬರ ಗರುಡಾ, ವರದಿಗಾರ ರೋಹಿತ್‌ ಬಿ.ಆರ್‌. ಹಾಗೂ ಟಿವಿ ನಿರೂಪಕ ಗಜಾನನ ಹೆಗಡೆ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಪತ್ರಕರ್ತರ ನಿಯೋಗ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಕುರಿತು ತಕ್ಷಣ ಪ್ರತಿ ಕುಟುಂಬಕ್ಕೂ ಆದಷ್ಟು ಬೇಗ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ, ಅಕಾಲಿಕ ಮರಣ ಹೊಂದುವ ಪತ್ರಕರ್ತರ ಕುಟುಂಬಗಳಿಗೆ ಪರಿಹಾರ ಒದಗಿಸಲು ವಿಶೇಷ ನಿಧಿ ಸ್ಥಾಪಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ಮನವಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next