Advertisement

“ಏಳರಲ್ಲಿ 5 ಸ್ಥಾನ ಬಿಜೆಪಿಗೆ’: ಸಚಿವ ಕೆ.ಸಿ.ನಾರಾಯಣ ಗೌಡ

12:20 AM Jan 04, 2023 | Team Udayavani |

ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯಲ್ಲಿ ಸುಭದ್ರವಾಗಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಭದ್ರಕೋಟೆಯನ್ನು ಒಡೆದು, 5 ಕ್ಷೇತ್ರಗಳಲ್ಲಾದರೂ ಕಮಲವನ್ನು ಅರಳಿಸಬೇಕು ಎಂದು ಸಂಕಲ್ಪ ಮಾಡಿದ್ದು, ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಮುಂದಾಗಿರುವುದಾಗಿ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.

Advertisement

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ, ಇಲ್ಲಿ ಕಮಲ ಅರಳಲು ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿದ್ದ ಟೀಕಾಕಾರರಿಗೆ ಕಳೆದ ಉಪಚುನಾವಣೆಯಲ್ಲಿ ಕೆ.ಆರ್‌.ಪೇಟೆ ಕ್ಷೇತ್ರದ ಮೂಲಕ ಕಮಲ ಅರಳಿಸಿ, ಇತಿಹಾಸ ನಿರ್ಮಾಣ ಮಾಡಿದ್ದೇನೆ. 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳಲ್ಲಿ 5 ಕ್ಷೇತ್ರದಲ್ಲಾದರೂ ಕಮಲವನ್ನು ಅರಳಿಸಿ, ಬಿಜೆಪಿಗೆ ಶಕ್ತಿ ತುಂಬಬೇಕು ಎಂದು ತೀರ್ಮಾನ ಮಾಡಿರುವುದಾಗಿ ಹೇಳಿದರು.

ಸಭೆಯಲ್ಲಿ ಗದ್ದಲದ ವಾತಾವರಣ: ಇತ್ತೀಚೆಗೆ ಪಕ್ಷ ಸೇರಿದ ಜೆಡಿಎಸ್‌, ಕಾಂಗ್ರೆಸ್‌ ಕಾರ್ಯಕರ್ತರಿಗೆ ಮಣೆ ಹಾಕಲಾಗುತ್ತಿದೆ. ಪಕ್ಷದ ನಾಯಕರ ಧೋರಣೆಯಿಂದ ನಮಗೆ ಅಸಮಧಾನವಾಗಿದೆ. ನಾವು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಹಲವು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆ ಮಧ್ಯೆ ರಾಜೀನಾಮೆ ಪತ್ರ ನೀಡಿದಾಗ, ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

Advertisement

Udayavani is now on Telegram. Click here to join our channel and stay updated with the latest news.

Next