Advertisement

Road mishap: ಮರಕ್ಕೆ ಢಿಕ್ಕಿಯಾದ ವಾಹನ; 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

11:59 AM Oct 31, 2023 | Suhan S |

ಲಕ್ನೋ:  4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಪ್ರದೇಶದಲ್ಲಿ ನಡೆದಿದೆ.

Advertisement

ಸೋಮವಾರ ತಡರಾತ್ರಿ (ಅ.30 ರಂದು) ಬಿಲಹೌರ್-ಕತ್ರಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ಐವರು ಬರಕಾಂತ್ ಗ್ರಾಮದಿಂದ ನಾಯಗಾಂವ್ ಕಡೆಗೆ ಹೋಗುತ್ತಿದ್ದರು, ದಾರಿ ಮಧ್ಯ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಬರುವ ವೇಳೆ ಗಾಯಾಳು ಮೃತಪಟ್ಟಿದ್ದಾರೆಂದು ಪೊಲೀಸ್ ಅಧೀಕ್ಷಕ ದುರ್ಗೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಅಪಘಾತದ ಭೀಕರತೆಗೆ ವಾಹನ ನಜ್ಜುನುಜ್ಜಾಗಿದ್ದು, ಗ್ಯಾಸ್‌ ಕಟ್ಟರ್‌ ಗಳನ್ನು ಬಳಸಿ ದೇಹಗಳನ್ನು ಹೊರತೆಗೆಯಲಾಯಿತೆಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next