Advertisement

ಅಗ್ನಿಗಾಹುತಿಯಾದ ಮನೆ; ಎಂಟು ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರ ಸಾವು!

09:28 AM Mar 08, 2022 | Team Udayavani |

ಕೊಚ್ಚಿನ್: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿದ ಘಟನೆ ಮಂಗಳವಾರ ಕೇರಳದ ವರ್ಕಲಾದಲ್ಲಿ ನಡೆದಿದೆ. ಬೆಳಗಿನ ಜಾವ 1.45 ರ ಸುಮಾರಿಗೆ ದಳವಪುರಂನಲ್ಲಿ ಈ ಘಟನೆ ನಡೆದಿದೆ.

Advertisement

ಮೃತರನ್ನು ಪ್ರತಾಪನ್ (62 ವ), ಶೆರ್ಲಿ (53 ವ), ಅಭಿರಾಮಿ (25 ವ), ಅಖಿಲ್ (29 ವ) ಮತ್ತು ಅಭಿರಾಮಿ ಅವರ ಎಂಟು ತಿಂಗಳ ಮಗ ರಿಯಾನ್ ಎಂದು ಗುರುತಿಸಲಾಗಿದೆ. ಪ್ರತಾಪನ್ ತರಕಾರಿ ಮಾರಾಟಗಾರರಾಗಿದ್ದರು. ವರ್ಕಲಾದಲ್ಲಿ ವ್ಯಾಪಾರ ಮಾಡುತ್ತಿದ್ದರು.

ತೀವ್ರ ಗಾಯಗೊಂಡಿರುವ ಪ್ರತಾಪನ್ ಅವರ ಹಿರಿಯ ಮಗ ನಿಹುಲ್ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕನಿಷ್ಠ ಐದು ಬೈಕ್ ಗಳು ಸುಟ್ಟುಹೋಗಿದ್ದು, ಮನೆಯಲ್ಲಿದ್ದ ಹವಾನಿಯಂತ್ರಣಗಳು (ಎಸಿ) ಸಹ ನಾಶವಾಗಿವೆ.

ಇದನ್ನೂ ಓದಿ:ಸ್ಫೋಟಗೊಳ್ಳದ 500 ಕೆಜಿ ಬಾಂಬ್‌! ಚೆರ್ನಿಹಿವ್‌ನ ಕಟ್ಟಡದಲ್ಲಿ ಬಿದ್ದಿದ್ದ ಬಾಂಬು

ಘಟನೆಯ ಕಾರಣದ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೋರೆನ್ಸಿಕ್ ತಜ್ಞರು ಸ್ಥಳವನ್ನು ಪರಿಶೀಲಿಸಿದ ನಂತರ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದಿವ್ಯಾ ಗೋಪಿನಾಥ್ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next