Advertisement

ಕೋವಿಡ್‌ 19 ವಾರಿಯರ‍್ಸ್‌ಗೆ 50 ಲಕ್ಷ ವಿಮೆ

07:27 AM May 24, 2020 | Lakshmi GovindaRaj |

ಮೊಳಕಾಲ್ಮೂರು: ಕೋವಿಡ್‌- 19 ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಕೇಂದ್ರದ ಆದೇಶದಂತೆ 50 ಲಕ್ಷ ರೂ. ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.  ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಮರ್ಥನಂ ಸಂಸ್ಥೆ ನೀಡಿದ ಪಿಪಿಇ ಕಿಟ್‌, ಸ್ಯಾನಿಟೈಸರ್‌, ಮಾಸ್ಕ್ ಹಾಗೂ ಇನ್ನಿತರ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.

Advertisement

ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆಯರು,  ಆರೋಗ್ಯ ಸಹಾಯಕಿಯರು ಸೇರಿ  ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರು ವವರಿಗೆ ವಿಮಾ ಸೌಲಭ್ಯ ನೀಡಲಾಗುವುದು. ರಾಜ್ಯದಲ್ಲಿ ಕೋವಿಡ್‌-19ನಿಂದ ಮೃತ ಪಟ್ಟಿರುವ ಮೂವರು ಆಶಾ ಕಾರ್ಯಕರ್ತೆಯರ ಕುಟುಂಬ ಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next