Advertisement

50 ಲ.ರೂ. ಕಾಳಧನ ಸಹಿತ ಯುವಕ ಪೊಲೀಸರ ವಶಕ್ಕೆ

12:26 AM Mar 12, 2024 | Team Udayavani |

ಕಾಸರಗೋಡು: ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಕಾಳಧನ ಹರಿದು ಬರುವ ಸಾಧ್ಯತೆಯಿದೆ ಎಂಬ ಮಾಹಿತಿಯಂತೆ ಹೊಸದುರ್ಗ ಪೊಲೀಸರು ನಡೆಸಿದ ವಾಹನ ತಪಾಸಣೆ ವೇಳೆ ದಾಖಲೆ ಗಳಿಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದೆ. ಈ ಸಂಬಂಧ ಯುವಕನೋರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮೊದೀನ್‌ ಶಾನನ್ನು ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಪಿ. ಅಸಾದ್‌ ನೇತೃತ್ವದ ಪೊಲೀಸ್‌ ತಂಡ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಾಂಞಂಗಾಡ್‌ ಡಿವೈಎಸ್‌ಪಿ ವಿ.ವಿ.ಲತೀಫ್‌ ಅವರ ನಿರ್ದೇಶನದಂತೆ ವಾಹನ ತಪಾಸಣೆ ನಡೆಸಲಾಗಿತ್ತು. ಕಾಸರಗೋಡಿನಿಂದ ಪಡನ್ನ ಭಾಗಕ್ಕೆ ತೆರಳುತ್ತಿದ್ದಾಗ ಕುಶಾಲ್‌ನಗರದಲ್ಲಿ ಯುವಕನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next