Advertisement

Congress 50 ಶಾಸಕರು ರಾಜೀನಾಮೆಗೆ ಸಿದ್ಧ: ಮುರುಗೇಶ ನಿರಾಣಿ

11:45 PM Dec 31, 2023 | Team Udayavani |

ಬಾಗಲಕೋಟೆ: ಬಿಟ್ಟಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರಕಾರ ಐದು ವರ್ಷ ಅಧಿಕಾರದಲ್ಲಿ ಇರುವ ಗ್ಯಾರಂಟಿ ಇಲ್ಲ. ಕಾಂಗ್ರೆಸ್‌ನ 50 ಶಾಸಕರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ. ಈ ಸರಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಸದ್ಯ ಕೋಮಾ ಸ್ಥಿತಿಯಲ್ಲಿದೆ. ಸರಕಾರ ಬಿಟ್ಟಿ ಭಾಗ್ಯಗಳ ಹಿಂದಿದ್ದು, ಒಂದೇ ಒಂದು ಹೊಸ ಯೋಜನೆಯನ್ನೂ ಜಾರಿಗೊಳಿಸಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next