Advertisement

Karnataka: ಈಡಿಗ ಅಭಿವೃದ್ಧಿ ನಿಗಮಕ್ಕೆ 500 ಕೋ.ರೂ.: ಸಿಎಂ ಭರವಸೆ

12:28 AM Dec 11, 2023 | Team Udayavani |

ಬೆಂಗಳೂರು: ರಾಜಕೀಯ ಲೆಕ್ಕಾಚಾರ ಹಾಗೂ ವೈಯಕ್ತಿಕ ಪ್ರತಿಷ್ಠೆಗಳ ಕಾರಣಕ್ಕೆ ಕುತೂಹಲ ಮೂಡಿಸಿದ್ದ ಈಡಿಗರ ಸಮಾವೇಶ ರಾಜಧಾನಿಯಲ್ಲಿ ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

Advertisement

ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಮುಖ ನಾಯಕರು ಈಡಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಸಹಿತ ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅಧಿವೇಶನ ಮುಗಿದ ಬಳಿಕ ಬೇಡಿಕೆಗಳ ಬಗ್ಗೆ ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ಇದಕ್ಕೆ ಮುನ್ನ ಡಿಸಿಎಂ ಡಿಕೆಶಿ ಮಾತನಾಡಿ, ಈಡಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತೇನೆ. ಈಗ ಅಧಿವೇಶನ ನಡೆಯುತ್ತಿದ್ದು, ಅಧಿಕೃತ ಘೋಷಣೆ ಮಾಡಲು ಆಗದು ಎಂದರು. ಈಡಿಗರ ಪ್ರಮುಖ ನಾಯಕ ಬಿ.ಕೆ. ಹರಿಪ್ರಸಾದ್‌ ಸಮಾವೇಶಕ್ಕೆ ಗೈರಾಗಿದ್ದುದು ಈಡಿಗರ ನಡುವೆ ಎರಡು ಬಣಗಳು ಹುಟ್ಟಿರುವುದಕ್ಕೆ ಪುಷ್ಟಿ ನೀಡಿದಂತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next