ದ್ದಾರೆಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎ.ಮಂಜು ಆರೋಪಿಸಿದರು.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ತಾಲೂಕಿನ ಗೌರಿಪುರ ಮತ್ತು ಸೋಮನಹಳ್ಳಿ ಕಾವಲ್ 10 ಕ್ಕೂ ಹೆಚ್ಚು ಸರ್ವೇ ನಂಬರ್ಗಳ 54.29 ಎಕರೆಯನ್ನು ಯಾರ್ಯಾರ ಹೆಸರಿಗೋ ದಾಖಲೆಗಳನ್ನು ಮಾಡಿಸಿ ಅವರಿಂದ ದೇವೇಗೌಡರ ಅತ್ತೆ ಕಾಳಮ್ಮ ಮತ್ತು ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರಿಗೆ 2014 -15ನೇ ಸಾಲಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಅಕ್ರಮ, ಅವ್ಯವಹಾರಕ್ಕೆ ರೇವಣ್ಣ ರಾಜಕೀಯ ಪ್ರಭಾವ ಬಳಸಿಕೊಂಡಿದ್ದರೆ ಕಂದಾಯ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಈ ಸಂಬಂಧ ಹಾಸನ ಡೀಸಿಗೆ ಹಾಗೂ ಕಂದಾಯ ಸಚಿವರಿಗೆ ದೂರು ನೀಡುತ್ತೇನೆ. ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುವೆ ಎಂದು ಎಚ್ಚರಿಸಿದರು.
– ಎ.ಮಂಜು, ಮಾಜಿ ಸಚಿವ