Advertisement

ಕೋರ್ಟ್‌ ರಸ್ತೆ ಅಭಿವೃದ್ಧಿಗೆ 55 ಲಕ್ಷ ರೂಪಾಯಿ ವೆಚ್ಚ

03:21 PM Nov 11, 2019 | Team Udayavani |

ದೊಡ್ಡಬಳ್ಳಾಪುರ: ನಗರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ತಾಲೂಕು ಕಚೇರಿ ಬಸವ ವನ ರಸ್ತೆ ಕಾಮಗಾರಿ ಡಿಸೆಂಬರ್‌ 20ರ ವೇಳೆಗೆ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

Advertisement

ನಗರದ ರುಮಾಲೇ ಛತ್ರದಿಂದ ಕೋರ್ಟ್‌ ರಸ್ತೆ ಮೂಲಕ ಡಿ.ಕ್ರಾಸ್‌ ರಸ್ತೆವರೆಗಿನ 55 ಲಕ್ಷ ರೂ ವೆಚ್ಚದಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆ ಬದಿಯಲ್ಲಿನವರು ಸ್ವಯಂ ಪೇರಿತವಾಗಿ ಸ್ಥಳ ಬಿಟ್ಟುಕೊಡುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು. ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next