Advertisement

10 ದಿನಗಳಲ್ಲಿ ರೈತರಿಗೆ 565 ಕೋಟಿ ರೂ. ಬಾಕಿ ಪಾವತಿ : ಎಂ.ಟಿ.ಬಿ.ನಾಗರಾಜ್‌

08:35 PM May 29, 2021 | Team Udayavani |

ಬೆಂಗಳೂರು : ರೈತರು ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿರುವ ಕಬ್ಬಿನ ಬಾಕಿ ಹಣವನ್ನು ಪಾವತಿ ಮಾಡುವಂತೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ 10 ದಿನಗಳಲ್ಲಿ 565 ಕೋಟಿ ರೂ. ಪಾವತಿಯಾಗಿದೆ ಎಂದು ಸಕ್ಕರೆ ಸಚಿವ ಎಂ.ಟಿ.ಬಿ.ನಾಗರಾಜ್‌ ತಿಳಿಸಿದ್ದಾರೆ.

Advertisement

2020-21 ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 1324.49 ಕೋಟಿ ರೂ. ಬಾಕಿ ಇರಿಸಿಕೊಂಡಿದ್ದ ಬಗ್ಗೆ ಸೂಚನೆ ನೀಡಿ ತಕ್ಷಣ ಪಾವತಿಗೆ ತಿಳಿಸಲಾಗಿತ್ತು. ಇದರಿಂದ 565 ಕೋಟಿ ರೂ. ಪಾವತಿಯಾಗಿದೆ. ಇದರಿಂದಾಗಿ ಕಬ್ಬು ಬೆಳೆಗಾರರಿಗೆ ಪಾವತಿಸಬೇಕಿದ್ದ 13348.10 ಕೋಟಿ ರೂ. ಪೈಕಿ ಶೇ 95 ಪಾವತಿ ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ,

ಉಳಿದ ಬಾಕಿ ಹಣ ಶೇಕಡಾ ಐದರಷ್ಟಿರುವ 759.74 ಕೋಟಿ ರೂ. ಕೂಡಲೇ ಪಾವತಿಸದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ನೋಟೀಸ್‌ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ನಿಯಮಾವಳಿಗಳನ್ನು ಪಾಲಿಸಿ ಮತ್ತೆ ಲಾಕ್‌ಡೌನ್‌ ಆಗುವುದನ್ನು ತಪ್ಪಿಸಿ : ಉಡುಪಿ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next