Advertisement

5, 8ನೇ ತರಗತಿಯಲ್ಲಿ ಅನುತ್ತೀರ್ಣ ಮಾಡುವುದಿಲ್ಲ: ಸಚಿವ ಬಿ.ಸಿ.ನಾಗೇಶ್‌

08:37 PM Dec 24, 2022 | Team Udayavani |

ತುಮಕೂರು: ಸರ್ಕಾರ ಐದು ಮತ್ತು ಎಂಟನೇ ತರಗತಿ ಮಕ್ಕಳ ಪರೀಕ್ಷೆ ಮೌಲ್ಯಮಾಪನ ಕುರಿತಂತೆ ಹೊರಡಿಸಿರುವ ಸುತ್ತೋಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು ತಪ್ಪಾಗಿ ಆರ್ಥೈಸಿದ್ದಾರೆ. ಅದು ಪಬ್ಲಿಕ್‌ ಪರೀಕ್ಷೆಯಲ್ಲ, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವುದಿಲ್ಲ. ಆತನ ಕಲಿಕೆಯನ್ನು ಮೌಲ್ಯ ಮಾಪನ ಮಾಡುವುದಷ್ಟೇ ಕೆಲಸವನ್ನು ಮಾಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

Advertisement

ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಳ ಹಂತದಲ್ಲಿ ಮಕ್ಕಳಿಗೆ ಏನು ಕಲಿಸಿಲ್ಲ ಎಂಬ ದೂರುಗಳು ಬರುತ್ತಿವೆ. ಅಲ್ಲದೇ ಡ್ರಾಪ್‌ಔಟ್‌ ಸಂಖ್ಯೆಯೂ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಆತ್ಮಸ್ಥೆçರ್ಯ ತುಂಬುವ ನಿಟ್ಟಿನಲ್ಲಿ ಮಗುವಿನ ತಿಳಿವಳಿಕೆಯನ್ನು ಮೌಲ್ಯಮಾಪನ ಮಾಡಲಾಗುತ್ತಿದೆ. ಇದರಿಂದ ಮುಂದಿನ ತರಗತಿಯಲ್ಲಿ ಆತ ತನ್ನ ಪಕ್ಕದಲ್ಲಿ ಕುಳಿತವನಿಗಿಂತ ನಾನು ಕಲಿಕೆಯಲ್ಲಿ ಹಿಂದೆ ಎಂಬ ಕೀಳರಿಮೆ ಬಾರದಂತೆ ನೋಡಿಕೊಳ್ಳುವುದೇ ಇದರ ಉದ್ದೇಶ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next