Advertisement
ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಕುರಿತು ಸಿದ್ದರಾಮಯ್ಯ ನೇತೃತ್ವದ ಸರಕಾರದದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ನಾಯಕ ” ಕೆಲವು ಆಪಾದಿತ ಅಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭವಾದ ನಂತರ ಮತ್ತು ಸಾರ್ವಜನಿಕವಾಗಿ ಚರ್ಚೆ ಪ್ರಾರಂಭ ವಾದ ನಂತರ ಕಾಂಗ್ರೆಸ್ ಆಡಳಿತ ನನ್ನನ್ನು ಕೆಲವು ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿದೆ” ಎಂದರು.
Related Articles
Advertisement
ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿರುದ್ಧ ಕಿಡಿ ಕಾರಿ ”ಬೆಂಗಳೂರು ಕಮಿಷನರ್, ಸಿಐಡಿ ಮುಖ್ಯಸ್ಥರ ಹುದ್ದೆಗಳ ಭರವಸೆ ಎಷ್ಟು ಅಧಿಕಾರಿಗಳಿಗೆ ನೀಡಿದ್ದೀರಿ? ಇದಕ್ಕಾಗಿ ನೀವು ಅವರನ್ನು ಏನು ಮಾಡುತ್ತೀರಿ” ಎಂದು ಪ್ರಶ್ನಿಸಿದರು.
”ನಾನು ಬಿಜೆಪಿಯೊಂದಿಗೆ ಕೈಜೋಡಿಸುವ ಮೊದಲೇ ನಿಮ್ಮ ಸರ್ಕಾರವನ್ನು ಗುರಿಯಾಗಿಸಲು ಪ್ರಾರಂಭಿಸಿದ ದಿನದಿಂದ, ನೀವು ಅಧಿಕಾರಿಗಳು ಮತ್ತು ಮಂತ್ರಿಗಳ ಮಟ್ಟದಲ್ಲಿ ಎಷ್ಟು ಸಭೆಗಳನ್ನು ನಡೆಸಿದ್ದೀರಿ? ನೀವು ಏನು ಮಾಡುತ್ತಿದ್ದೀರಿ ಎಂದು ನನಗೆ ಮಾಹಿತಿ ಇಲ್ಲವೇ? ” ಎಂದು ಕೆಂಡಾಮಂಡಲವಾದರು.
ಕುಮಾರಸ್ವಾಮಿ ಅವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಮುಂದೆ ಗಂಗೇನಹಳ್ಳಿ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದ ಮರುದಿನ ಸುದ್ದಿಗೋಷ್ಠಿ ನಡೆಸಿ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.