Advertisement

ಸಿಂದಗಿ ಉಪಚುನಾವಣೆ : ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು

06:28 PM Oct 13, 2021 | Team Udayavani |

ವಿಜಯಪುರ : ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆಯುವ ಕೊನೆ ದಿನವಾಗಿದ್ದ ಬುಧವಾರ ಪಕ್ಷೇತರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಇಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಇದರೊಂದಿಗೆ ಅಂತಿಮ ಕಣದಲ್ಲಿ ಆರು ಅಭ್ಯರ್ಥಿಗಳು ಉಳಿದಿದ್ದಾರೆ.

Advertisement

ಕಾಂಗ್ರೆಸ್ ನ ಅಶೋಕ ಮನಗೂಳಿ, ಜೆಡಿಎಸ್ ನ ನಾಜಿಯಾ ಅಂಗಡಿ, ಬಿಜೆಪಿ ಪಕ್ಷದ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಡಾ.ಸುನೀಲಕುಮಾರ ಹೆಬ್ಬಿ, ಪಕ್ಷೇತರ ಅಭ್ಯರ್ಥಿಗಳಾಗಿ ಜೀಲಾನಿ ಮುಲ್ಲಾ, ಬೆಂಗಳೂರು ಮೂಲದ ದೀಪಿಕಾ ಎಸ್ ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಸ್ಪರ್ಧೆಗಾಗಿ ನಾಮಪತ್ರ ಸಲ್ಲಿಸಿದ್ದ ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ ಎಂದು ಸಿಂದಗಿ ಚುನಾವಣೆ ಅಧಿಕಾರಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next