Advertisement

ವಿದ್ಯುತ್ ತಂತಿ ಸ್ಪರ್ಶಿಸಿ 2 ಮರಿ ಆನೆ ಸೇರಿ ನಾಲ್ಕು ಕಾಡಾನೆ ಬಲಿ!

04:13 PM Jun 27, 2017 | Team Udayavani |

ಕೊಡಗು/ವಿರಾಜಪೇಟೆ: ಭಾರೀ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 2 ಮರಿ ಸೇರಿ ನಾಲ್ಕು ಕಾಡಾನೆಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಕಣ್ಣಂಗಾಲದಲ್ಲಿ ಮಂಗಳವಾರ ನಡೆದಿದೆ. 

Advertisement

ವಿದ್ಯುತ್ ತಂತಿಯಿಂದಾಗಿ ಕಾಡಾನೆಗಳ ಮಾರಣ ಹೋಮ ನಡೆಯುವಂತಾಗಿದೆ. ಕಳೆದ 15 ದಿನಗಳಲ್ಲಿ ಸುಮಾರು 6 ಕಾಡಾನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಜೂನ್ 14ರಂದು ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವನ್ನಪ್ಪಿದ್ದವು. ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪರಿಸರ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next