Advertisement

ಕುಷ್ಟಗಿಯ ಇಬ್ಬರು ಮಟ್ಕಾ, ಜೂಜುಕೋರರ 6 ತಿಂಗಳ ಗಡಿಪಾರು

09:53 AM Jan 16, 2021 | Team Udayavani |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಇಬ್ಬರು ಜೂಜುಕೋರರನ್ನೂ ವಿವಿಧ ಅಪರಾಧದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವರದಿ ಆಧರಿಸಿ ಕೊಪ್ಪಳ ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 6 ತಿಂಗಳ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಗಿನ ಓಣಿಯ ನಿವಾಸಿ ಯಮನೂರು ಸಿಂಧನೂರು, ಇನ್ನೋರ್ವ ಕಟ್ಟಿ ಗ್ರಾಮದ ನಸರಪ್ಪ ನೇಕಾರ ಎನ್ನುವ ಈ ಇಬ್ಬರು ಗಡಿಪಾರು ಶಿಕ್ಷೆಗೆ ಒಳಗಾದವರು.

ಇವರಿಬ್ಬರೂ ಪ್ರತ್ಯೇಕವಾಗಿ ಜನರಿಗೆ ಮೋಸ ಮಾಡಲು ಜೂಜಾಟ ನಡೆಸುವುದು, ಮಟ್ಕಾ ಆಟ ಆಡಿಸಿ ಜನರಿಂದ‌ ದುಡ್ಡು ಪಡೆಯುವುದು ಸೇರಿ ಬಡ ಜನರ ಜೀವದ ಜೊತೆ ಆಟವಾಡುತ್ತಿದ್ದು ಈ ಇಬ್ಬರ ಮೇಲೂ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ:  ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !

ಪೊಲೀಸ್ ಇಲಾಖೆ ಇಬ್ಬರ ವರದಿಯನ್ನು ಎಸಿ ಅವರಿಗೆ ಸಲ್ಲಿಸಿತ್ತು. ವರದಿ ಪರಿಶೀಲಿಸಿದ ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 6 ತಿಂಗಳ ಗಡಿಪಾರಿಗೆ ಆದೇಶ ಮಾಡಿದ್ದಾರೆ. ಯಮನೂರ ಸಿಂಧನೂರು ಎಂಬ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಗೆ ಹಾಗೂ ನರಸಪ್ಪ ನೇಕಾರ ಎಂಬ ವ್ಯಕ್ತಿಯನ್ನ ಕೋಲಾರ ಜಿಲ್ಲೆಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.

Advertisement

ಇದನ್ನೂ ಓದಿ: ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್

Advertisement

Udayavani is now on Telegram. Click here to join our channel and stay updated with the latest news.

Next