Advertisement

ಸೊಳ್ಳೆ ಕಾಯಲ್ ನಿಂದ ಉಸಿರುಗಟ್ಟಿ ಮಗು ಸೇರಿದಂತೆ ಆರು ಮಂದಿ ಕೊನೆಯುಸಿರು…

12:44 PM Mar 31, 2023 | Team Udayavani |

ನವದೆಹಲಿ: ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಕೊನೆಯುಸಿರೆಳೆದಿರುವ ದಾರುಣ ಘಟನೆ ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿರುವುದಾಗಿ ವರದಿ ತಿಳಿಸಿದೆ. ಮೇಲ್ನೋಟಕ್ಕೆ ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ಇಹಲೋಕ ತ್ಯಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದೆ. ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದಿದ್ದು, ಇದರಲ್ಲಿ ಮಕ್ಕಳು ಸೇರಿದಂತೆ ಆರು ಜನರು ವಿಧಿವಶರಾಗಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ನಾಲ್ವರು ಪುರುಷರು, ಒಬ್ಬಳು ಮಹಿಳೆ ಹಾಗೂ ಒಂದು ಮಗು ಸೇರಿದಂತೆ ಆರು ಮಂದಿ ವಿಧಿವಶರಾಗಿದ್ದಾರೆ. ಇದರಲ್ಲಿ 15 ವರ್ಷದ ಬಾಲಕಿ ಹಾಗೂ 45 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next