Advertisement

6 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಆರೋಪಿಯನ್ನು ಎನ್ ಕೌಂಟರ್ ಮಾಡ್ತೇವೆ: ತೆಲಂಗಾಣ ಸಚಿವ

02:46 PM Sep 15, 2021 | Team Udayavani |

ಹೈದರಾಬಾದ್: ಆರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಹಿಡಿದು ನಂತರ ಎನ್ ಕೌಂಟರ್ ಮಾಡಿ ಕೊಲ್ಲುತ್ತೇವೆ. ನಾವು ಖಂಡಿತವಾಗಿಯೂ ಆರೋಪಿಯನ್ನು ಬಂಧಿಸಿ, ನಂತರ ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

Advertisement

ಇದನ್ನೂ ಓದಿ:ಭಾರತ:ಕಳೆದ 24 ಗಂಟೆಗಳಲ್ಲಿ 27,176 ಕೋವಿಡ್ ಪ್ರಕರಣ ಪತ್ತೆ, ಕೇರಳದಲ್ಲಿ ಅತೀ ಹೆಚ್ಚು ಪ್ರಕರಣ

ಅತ್ಯಾಚಾರ ಎಸಗಿದ ಆರೋಪಿಯನ್ನು ಎನ್ ಕೌಂಟರ್ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಕೂಡಾ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

ನಾನು ಅತ್ಯಾಚಾರಕ್ಕೆಳಗಾದ ಸಂತ್ರಸ್ತೆ ಬಾಲಕಿಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ್ಯವಸ್ಥೆ ಮಾಡುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ರೆಡ್ಡಿ ತಿಳಿಸಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡದ ವಿಪಕ್ಷ ನಾಯಕರ ಟೀಕೆಗೆ ಉತ್ತರಿಸಿದ ಅವರು, ಎನ್ ಕೌಂಟರ್ ಕುರಿತ ಮಾತುತೆಯಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆರೋಪಿ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.

ಪೊಲೀಸ್ ಮೂಲಗಳ ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿಯನ್ನು ಭುವನ್ ಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದಲ್ಲಿ ಬಂಧಿಸಲಾಗಗಿತ್ತು ಎಂದು ತಿಳಿಸಿದೆ. ಆದರೆ ಅತ್ಯಾಚಾರಗೈದ ಆರೋಪಿ ನಾಪತ್ತೆಯಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ತಲೆಮರೆಯಿಸಿಕೊಂಡಿರುವ ಆರೋಪಿ ಪತ್ತೆಗಾಗಿ 15 ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ. ಪೊಲೀಸರು ಪರಿಶೀಲಿಸಿದ ಸಿಸಿಟವಿ ಫೂಟೇಜ್ ಪ್ರಕಾರ, ಆರೋಪಿ ತಲೆಗೆ ಟೋಪಿ ಧರಿಸಿದ್ದು, ಮುಖಕ್ಕೆ ಮಾಸ್ಟ್ ಹಾಕಿಕೊಂಡು ಮತ್ತೊ ವ್ಯಕ್ತಿಯೊಂದಿಗೆ ಹೊರಟು ಹೋಗಿರುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next