Advertisement

60 ಮಂದಿ ಕಾಂಗ್ರೆಸ್‌ಗೆ ಮರಳಲು ಅರ್ಜಿ

12:51 PM Sep 20, 2020 | Suhan S |

ಬೆಂಗಳೂರು: ಕಾಂಗ್ರೆಸ್‌ ಬಿಟ್ಟು ಹೋಗಿರುವ 60 ಹಿರಿಯ ನಾಯಕರು ಮರಳಿ ಪಕ್ಷಕ್ಕೆ ಬರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜೆಡಿಎಸ್‌ ಮುಖಂಡ ರಮೇಶ್‌ ಬಾಬು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಂಡು ಮಾತನಾಡಿದ ಅವರು, ಪಕ್ಷಕ್ಕೆ ಮರಳಿಬರಲುಮುಂದಾಗಿರುವವರನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಸಮಿತಿ ರಚನೆ ಮಾಡಿದ್ದು ಎಲ್ಲ ರೀತಿಯಲ್ಲೂ ಪರಿಶೀಲಿಸಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಮೇಶ್‌ ಬಾಬು ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು. ಸದ್ಯದಲ್ಲೇ ವಿಧಾನಪರಿಷತ್‌ ಚುನಾವಣೆ ಬರುವುದರಿಂದ ರಮೇಶ್‌ ಬಾಬು ಕಾಂಗ್ರೆಸ್‌ ಸೇರ್ಪಡೆಗೆ ನಾವು ಒಪ್ಪಿಕೊಂಡೆವು ಎಂದು ಹೇಳಿದರು. ರಮೇಶ್‌ ಬಾಬು ಮಾತನಾಡಿ, ಸಿದ್ದರಾಮಯ್ಯನವರು ಜನತಾದಳದ ರಾಜ್ಯಾಧ್ಯಕ್ಷರಾಗಿದ್ದಾಗ ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಚಳವಳಿ ರೂಪದಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ,ರಮೇಶ್‌ ಬಾಬು ಒಬ್ಬ ಸಂಘಟನಕಾರ ನಾನು ಜೆಡಿಎಸ್‌ನಲ್ಲಿದ್ದಾಗ ಅವರು ಜೆಡಿಎಸ್‌ ಪಕ್ಷದಲ್ಲಿ ಇದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಒಂದು ರೀತಿ ತಾಯಿ ಪಕ್ಷ ದೇವೇಗೌಡರು ಕಾಂಗ್ರೆಸ್‌ ಪಕ್ಷದಲ್ಲಿ ತಾಲೂಕು ಬೋರ್ಡ್‌ ಮೇಂಬರ್‌ ಆಗಿದ್ದವರು.ರಾಮಕೃಷ್ಣ ಹೆಗಡೆ ಕೂಡ ಕಾಂಗ್ರೆಸ್‌ ಪಕ್ಷದವರು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next