Advertisement

6,100 ಮಂದಿ ಮನೆಯಿಂದಲೇ ಮತದಾನಕ್ಕೆ ಅರ್ಜಿ; ಕ್ಷೇತ್ರದಲ್ಲಿ ಮತ ಪಡೆಯುವ ಪ್ರಕ್ರಿಯೆ ಆರಂಭ

12:30 AM Apr 14, 2024 | Team Udayavani |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

Advertisement

ಜಿಲ್ಲಾ ಚುನವಾಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಶನಿವಾರ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಿದರು.

ಉಡುಪಿ ಜಿಲ್ಲೆಯ ಕಾಪು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4,474 ಹಾಗೂ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ತರೀಕೆರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,626 ಮಂದಿ ಮನೆಯಿಂದಲೇ ಮತದಾನದ ಆಯ್ಕೆ ಪಡೆದುಕೊಂಡಿದ್ದಾರೆ.

ನಿರ್ದಿಷ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನಿಯೋಜಿಸಿರುವ ತಂಡವು ಸಂಬಂಧಪಟ್ಟ ಮತದಾರರ ಮನೆಗೆ ಹೋಗಿ ಮತದಾನ ಪಡೆಯಲಿದೆ. ಮನೆಯಲ್ಲಿ ಮತದಾನದ ಅವಕಾಶ ಪಡೆದ ಮತದಾರರು ಆ ದಿನದಂದು ಮನೆಯಲ್ಲಿದ್ದು ಮತದಾನ ಮಾಡಬೇಕು. ಮನೆಯಿಂದಲೇ ಮತದಾನ ಮಾಡುವ ಆಯ್ಕೆ ಪಡೆದು ಹಕ್ಕು ಚಲಾಯಿಸದಿದ್ದವರು ಸಾರ್ವತ್ರಿಕ ಮತದಾನದ ದಿನದಂದು ಬೂತ್‌ಗೆ ಬಂದು ಮತದಾನ ಮಾಡಲು ಅವಕಾಶ ಇರುವುದಿಲ್ಲ ಎಂದು ಡಾ| ಕೆ. ವಿದ್ಯಾಕುಮಾರಿ ತಿಳಿಸಿದರು.

ಕ್ಷೇತ್ರದಾದ್ಯಂತ ಪ್ರಕ್ರಿಯೆ ಆರಂಭವಾಗಿದೆ. ಎ. 18ರೊಳಗೆ ಈ ಪ್ರಕ್ರಿಯೆ ಮುಗಿಸಬೇಕಿರುವುದರಿಂದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಪ್ರತ್ಯೇಕ ತಂಡ ರಚನೆ ಮಾಡಲಿದ್ದೇವೆ. ಒಂದೊಂದು ಕ್ಷೇತ್ರದಲ್ಲಿ ಮೂರು ದಿನ ಈ ಪ್ರಕ್ರಿಯೆ ನಡೆಯಲಿದೆ ಎಂದು ವಿವರಿಸಿದರು.

Advertisement

ಮಂಗಳೂರಿನಲ್ಲಿ ಎ. 15ರಿಂದ ಮತದಾನ
ದ.ಕ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎ. 15ರಿಂದ 85 ವರ್ಷಮೇಲ್ಪಟ್ಟವರು ಹಾಗೂ ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಚುನಾವಣ ಆಯೋಗದ ನಿಯಮದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ಎಂಬುದು ಉದ್ದೇಶದಿಂದ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಮತದಾರ ಯಾರಿಗೆ ಮತದಾನ ಮಾಡಿದ್ದಾರೆ ಎಂಬುದು ಗೌಪ್ಯವಾಗಿದ್ದು, ಉಳಿದಂತೆ ಎಲ್ಲ ಪ್ರಕ್ರಿಯೆಯನ್ನು ವಿಡಿಯೋ ಚಿತ್ರಣ ಮಾಡಲಾಗುತ್ತದೆ.
-ಡಾ| ಕೆ. ವಿದ್ಯಾಕುಮಾರಿ, ಚುನಾವಣಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next