Advertisement

ಜಿಲ್ಲೆಯಲ್ಲಿ 64 ಖರೀದಿ ಕೇಂದ್ರ ಸ್ಥಾಪನೆ

04:56 PM Sep 21, 2020 | Team Udayavani |

ಕಲಬುರಗಿ: ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಮುಂದಾಗಿದ್ದು, ಇದಕ್ಕಾಗಿ 64 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಇತರ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

Advertisement

ಪ್ರಸಕ್ತ 2020-21ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಇದರಡಿ ಖರೀದಿಗೆ ಮುಂದಾಗಿದ್ದು, ಹೆಸರು ಕ್ವಿಂಟಲ್‌ಗೆ 7196 ರೂ. ಹಾಗೂ ಉದ್ದು ಕ್ವಿಂಟಲ್‌ಗೆ 6000 ರೂ. ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗುತ್ತಿದೆ.

ಹೆಸರು ಕಾಳು ಪ್ರತಿ ಎಕರೆಗೆ ನಾಲ್ಕು ಕ್ವಿಂಟಲ್‌ನಂತೆ ಪ್ರತಿ ರೈತನಿಂದ ಗರಿಷ್ಠ ನಾಲ್ಕು ಕ್ವಿಂಟಲ್‌ ಹಾಗೂ ಉದ್ದು ಪ್ರತಿ ಎಕರೆಗೆ ಮೂರು ಕ್ವಿಂಟಲ್‌ ನಂತೆ ಪ್ರತಿ ರೈತರಿಂದ ಗರಿಷ್ಠ 6 ಕ್ವಿಂಟಲ್‌ ಖರೀದಿಗೆ ನಿಗದಿ ಮಾಡಲಾಗಿದೆ. ಬೆಂಬಲ ಬೆಲೆಯಲ್ಲಿ ಉದ್ದು ಹಾಗೂ ಹೆಸರು ಮಾಡಲಿಚ್ಚಿಸುವ ರೈತರು ಅವಶ್ಯಕ ದಾಖಲಾತಿಗಳೊಂದಿಗೆ ಇದೇ ಬರುವ ಅಕ್ಟೋಬರ್‌ 15ರೊಳಗೆ ಹೆಸರು ನೋಂದಾಯಿಸಬೇಕು. ಖರೀದಿ ಪ್ರಕ್ರಿಯೆ ನವ್ಹೆಂಬರ್‌ 15ರವರೆಗೆ ನಡೆಯುತ್ತದೆ.

ಹೆಸರು ನೋಂದಣಿ ಹಾಗೂ ಖರೀದಿಗೆಸಂಬಂಧಿಸಿದಂತೆ ಈಗಿನಿಂದಲೇ ಮಾಡಿಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಸೆ.21ರಂದು ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೇಂದ್ರಸರ್ಕಾರದ 2020-21ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಕಲಬುರಗಿ ಜಿಲ್ಲಾದ್ಯಂತ ಒಟ್ಟು 64 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು  ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಹೆಸರು ಮತ್ತು ಉದ್ದು ಕಾಳು ಬೆಳೆದಿರುವ ರೈತ ಬಾಂಧವರು ಅಗತ್ಯ ಮಾಹಿತಿಗಳೊಂದಿಗೆ ಸಮೀಪದ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಕೃಷಿ ಉತ್ಪನ್ನ ಮಾರಾಟ ಮಾಡುವಂತೆ ರೈತರಲ್ಲಿ ಕೋರಿದ್ದಾರೆ.

Advertisement

ಖರೀದಿ ಕೇಂದ್ರಗಳು ಎಲ್ಲಲ್ಲಿ? : ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದಡಿ ಸ್ಥಾಪಿಸಲಾದ ಹೆಸರು ಮತ್ತು ಉದ್ದು ಕಾಳು ಖರೀದಿ ಕೇಂದ್ರಗಳ ವಿವರ ಹೀಗಿದೆ.

ಕಲಬುರಗಿ: ಅವರಾದ್‌(ಬಿ), ಸೊಂತ, ಸಾವಳಗಿ, ಮಹಾಗಾಂವ, ಹರಸೂರ ಹಾಗೂ ಡೊಂಗರಗಾಂವ  ಪ್ರಾಥಮಿಕ ಕೃಷಿ .ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಗ್ರಾಮೀಣ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಮಲಾಪುರ ಮತ್ತು ನೇಗಿಲಯೋಗಿ ರೈತ ಉತ್ಪಾದಕ ಸಂಘ ಮೇಳಕುಂದಾ(ಬಿ).

ಆಳಂದ: ಖಜೂರಿ, ಮಾದನಹಿಪ್ಪರಗಾ, ನಿಂಬರ್ಗಾ, ಸರಸಂಬಾ, ಕಮಲಾನಗರ, ಮುನ್ನೊಳ್ಳಿ, ಯಳಸಂಗಿ, ಹಿರೋಳ್ಳಿ, ತಡಕಲ್‌, ಬೊಮ್ಮನಳ್ಳಿ, ಕಡಗಂಚಿ, ನರೋಣಾ ಹಾಗೂ ನಿಂಬಾಳ ಪ್ರಾ. ಕೃ.ಪ.ಸ. ಸಂಘ ನಿಯಮಿತ. ಅಫಜಲಪುರ: ಕರಜಗಿ, ಅತನೂರ್‌ ಹಾಗೂ ಭೈರಾಮಡಗಿ ಪ್ರಾ.ಕೃ.ಪ.ಸ.ಸಂಘ ನಿಯಮಿತ. ಜೇವರ್ಗಿ: ಜೇರಟಗಿ, ಕುಮನಸಿರಸಗಿ ಹಾಗೂ ನರಿಬೋಳ ಪ್ರಾ.ಕೃ.ಪ.ಸ.ಸಂಘ ನಿಯಮಿತ.

ಸೇಡಂ: ಮುಧೋಳ, ಹಾಬಾಳ್‌(ಟಿ), ಅಡಕಿ, ಸಿಂಧನಮಡು, ಕಾನಾಗಡ್ಡಾ, ಕೋಳಕುಂದಾ, ಮೋತಕಪಲ್ಲಿ, ಯಡಗಾ, ಕೋಳಕುಂದಾ ಗ್ರಾಮೀಣ ಪ್ರಾ.ಕೃ.ಪ.ಸ.ಸಂಘ ನಿಯಮಿತ ಹಾಗೂ ಬಲಭೀಮಸೇನಾ ರೈತ ಉತ್ಪಾದಕರ ಸಂಸ್ಥೆ ಬೀದರಚೇಡ್‌ ಮತ್ತು ಕಾಗಿಣಾ ರೈತ ಉತ್ಪಾದಕರ ಸಂಸ್ಥೆ ಸುರವಾರ.

ಚಿತ್ತಾಪುರ: ನಾಲವಾರ, ಕಾಳಗಿ, ರಾವೂರ, ಹಲಕಟ್ಟಾ, ಕೊಡದೂರ್‌, ದಂಡೋತಿ, ಅರಣಕಲ್‌, ಹೆಬ್ಟಾಳ, ಭೀಮನಹಳ್ಳಿ, ಟೆಂಗಳಿ, ಆಲ್ಲೂರ(ಬಿ), ಮಂಗಲಗಿ, ಡೋಣಗಾಂವ್‌, ಪೇಟಶಿರೂರ, ಹೇರೂರ ಹಾಗೂ ಕುಂದಗೋಳ ಪ್ರಾ.ಕೃ.ಪ. ಸ.ಸಂಘ ನಿಯಮಿತ.

Advertisement

Udayavani is now on Telegram. Click here to join our channel and stay updated with the latest news.

Next