Advertisement

ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ 650 ಹಾಸಿಗೆ ದೇಣಿಗೆ ನೀಡಿದ ಮಲ್ಲಿಕಾರ್ಜುನ ಖರ್ಗೆ

06:21 PM Jul 19, 2020 | sudhir |

ಬೆಂಗಳೂರು: ಕಲಬುರ್ಗಿಯಲ್ಲಿ ಕೋವಿಡ್ -19 ಸೋಂಕು ದಿನೇ ದಿನೇ ವ್ಯಾಪಕಗೊಳ್ಳುತ್ತಿದ್ದು, ಜಿಲ್ಲೆಯ ನಿಗದಿತ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಸಿಗೆ ಅಭಾವವಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸೋಂಕಿತರ ನೆರವಿಗೆ ಸಹಾಯಹಸ್ತ ಚಾಚಿದ್ದಾರೆ ಎಂದು ಮಾಜಿ ಸಚಿವರೂ ಆದ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Advertisement

ಕೋವಿಡ್ ಸಂಕಷ್ಟಕ್ಕೆ ಗುರಿಯಾಗಿರುವ ಸೋಂಕಿತರಿಗೆ ನೆರವಾಗಲು ತಮ್ಮ ಹುಟ್ಟುಹಬ್ಬದ ಸಲುವಾಗಿ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಜೊತೆಗೂಡಿ 550 ಹಾಸಿಗೆಗಳನ್ನು ಕಲಬುರ್ಗಿ ಜಿಲ್ಲೆಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಾರಿ ಕೋವಿಡ್ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಜನ್ಮ ದಿನವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿರುವ ಮಲ್ಲಿಕಾರ್ಜುನ ಖರ್ಗೆ, ತಮ್ಮ ಅಭಿಮಾನಿಗಳಿಗೂ ಜನುಮದಿನ ಆಚರಿಸದಂತೆ ಮನವಿ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಆಸ್ಪತ್ರೆಗಳಿಗೆ 100 ಹಾಸಿಗೆಗಳನ್ನು ಖರ್ಗೆ ದೇಣಿಗೆ ನೀಡಿದ್ದಾರೆ.

ವಿಶೇಷ ರೀತಿಯಲ್ಲಿ ತಯಾರಿಸಿರುವ ಪ್ರತಿ ಹಾಸಿಗೆ ಬೆಲೆ ಸಾವಿರ ರೂಪಾಯಿಗಳಾಗಿದ್ದು, ಕನಿಷ್ಟ 400 ಕೆ.ಜಿ. ಭಾರ ತಾಳಬಲ್ಲದಾಗಿದೆ. ಜಿಲ್ಲಾಡಳಿತ ಹಾಸಿಗೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು, ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು ಎಂದುಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next