Advertisement

ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢ; ಶಾಲೆ ಸೀಲ್ ಡೌನ್

11:03 AM Dec 05, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ನವೋದಯಾ ವಿದ್ಯಾಲಯದಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಮೂರು ದಿನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

Advertisement

60 ವಿದ್ಯಾರ್ಥಿಗಳು 3 ಶಿಕ್ಷಕರು, 4 ಮಂದಿ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಇಲಾಖೆಯು 418 ವಿಧ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದು ತಪಾಸಣೆ ನಡೆಸಿದೆ. ಈ ವೇಳೆ 67 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇದನ್ನೂ ಓದಿ:ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಜವಾಹರ್ ನವೋದಯ ವಿದ್ಯಾಲಯವನ್ನು ಜಿಲ್ಲಾಡಳಿತವು ಸೀಲ್ ಡೌನ್ ಮಾಡಿದ್ದು ಮುಂಜಾಗೃತೆ ಕ್ರಮ ಕೈಗೊಂಡಿದೆ.

Advertisement

ಕೋವಿಡ್ ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲ, ಸ್ವ್ಯಾಬ್ ಟೆಸ್ಟ್ ವೇಳೆ ಸೋಂಕು ದೃಡಪಟ್ಟಿದೆ. ಸೋಂಕಿತರನ್ನು ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ.

ಸ್ಥಳಕ್ಕೆ ಡಿ.ಎಚ್.ಓ, ಡಾ.ಉಮೇಶ್, ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next