Advertisement

Congress: ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

08:52 PM Feb 29, 2024 | Team Udayavani |

ಮಾಗಡಿ(ರಾಮನಗರ ಜಿಲ್ಲೆ) : ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ನಮ್ಮ ಸರ್ಕಾರ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿಯನ್ನೂ ಜಾರಿಗೆ ತರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿ, ಐದು ಗ್ಯಾರಂಟಿಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದೇವೆ. ಪ್ರತಿವರ್ಷ 24 ಸಾವಿರ ಕೋಟಿ ರೂ. ಗೃಹಲಕ್ಷ್ಮಿಹಣ ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತಿದೆ. ಮಾಗಡಿ ತಾಲೂಕಿನಲ್ಲಿ 51 ಸಾವಿರ ಕುಟುಂಬಗಳಿಗೆ ಹಣ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.

Advertisement

ಬಿಜೆಪಿಯವರು 5 ಸಾವಿರ ಕೋಟಿ ಖರ್ಚು ಮಾಡಿ ರಾಮಮಂದಿರ ಕಟ್ಟುತ್ತಾರೆ. ಆದರೆ ನಾವು 4800 ಕೋಟಿ ರೂ. ಹಣವನ್ನು ಪ್ರತಿ ತಿಂಗಳು ಮಹಿಳೆಯರಿಗೆ ನೀಡುತ್ತಿದ್ದೇವೆ. ಜನರ ಬದುಕನ್ನು ಹಸನು ಮಾಡಿ ನಿಜವಾದ ರಾಮ ರಾಜ್ಯ ನಿರ್ಮಾಣ ಮಾಡುತ್ತಿರುವವರು ನಾವು. ನಮ್ಮ ಗ್ಯಾರಂಟಿಗಳು ನಿಲ್ಲುತ್ತವೆ ಎಂದು ಹೇಳುತ್ತಿರುವವರು ಮೂರ್ಖರು ಎಂದು ಹೆಬ್ಟಾಳ್ಕರ್‌ ಬಿಜೆಪಿ ವಿರುದ್ಧ ಹರಿಹಾಯ್ದರು.

Advertisement

Udayavani is now on Telegram. Click here to join our channel and stay updated with the latest news.

Next