Advertisement

ಮರಕ್ಕೆ ಕಾರು ಢಿಕ್ಕಿ : ಏಳು ಮಂದಿ ಸಾವು; ಮೂವರಿಗೆ ಗಂಭೀರ ಗಾಯ

06:49 AM Mar 13, 2019 | Team Udayavani |

ದೇವರಿಯಾ, ಉತ್ತರ ಪ್ರದೇಶ : ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಭೀಕರ ದುರಂತದಲ್ಲಿ 7 ಮಂದಿ ಮೃತಪಟ್ಟು ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿನ್ನೆ ಮಂಗಳವಾರ ತಡ ರಾತ್ರಿ ಮರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಕಾರು ದೇವರಿಯಾ-ರುದ್ರಪುರ ರಸ್ತೆಯಲ್ಲಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಸರ್ಕಲ್‌ ಆಫೀಸರ್‌ ವರುಣ್‌ ಮಿಶ್ರಾ ತಿಳಿಸಿದ್ದಾರೆ.

ಮರಕ್ಕೆ ಢಿಕ್ಕಿ ಹೊಡೆದ ಕಾರು ಅನಂತರ ಅಡಿ ಮೇಲಾಗಿ ಉರುಳಿ ಬಿತ್ತು.ಕಾರಿನಲ್ಲಿದ್ದವರು ಖೋರ್ಮಾ ಗ್ರಾಮದ ನಿವಾಸಿಗಳು.

ಮೃತರನ್ನು ಸಚಿನ್‌ (18), ಬಹಾದ್ದೂರ್‌ (45) ಶಿವ ಪೂಜನ್‌ (70), ದಲ್‌ ಸಿಂಗಾರ್‌ (68) ಇಂದು ಗುರುತಿಸಲಾಗಿದೆ. ಇನ್ನೂ ಮೂವರು ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಗಾಯಾಳುಗಳನ್ನು ಗೋರಖ್‌ಪುರ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next