Advertisement

ಕಚ್ಛಾ ಬಾಂಬ್ ತಯಾರಿಕೆ? ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮಾಲೀಕ ಸೇರಿ 7ಮಂದಿ ಸಾವು

02:57 PM Sep 04, 2020 | Nagendra Trasi |

ಚೆನ್ನೈ:ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆ ಮಾಲೀಕ ಸೇರಿದಂತೆ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಲ್ಲದೇ ನಾಲ್ವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸ್ಫೋಟದಿಂದ ಕಾಂಕ್ರೀಟ್ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಸಮೀಪದಲ್ಲಿ ಜನರ ಆಕ್ರಂದನದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಅವಶೇಷಗಳ ಸುತ್ತ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶವಗಳು, ಘಟನಾ ಸ್ಥಳದಲ್ಲಿ ನೂರಾರು ಜನರು ಸೇರಿರುವುದಾಗಿ ವರದಿ ವಿವರಿಸಿದೆ.

ಚೆನ್ನೈನಿಂದ 190 ಕಿಲೋ ಮೀಟರ್ ದೂರದಲ್ಲಿರುವ ಕಡಲೂರಿನ ಕುಟ್ಟುಮನ್ನಾರ್ ಕೋಯಿಲ್ ಸಮೀಪದ ಅಧಿಕೃತ ಪಟಾಕಿ ಕಾರ್ಖಾನೆ ಇದಾಗಿದೆ. ಈ ಕಾರ್ಖಾನೆಯಲ್ಲಿ ದೇಶೀ ನಿರ್ಮಿತ ಬಾಂಬ್ ತಯಾರಿಸುತ್ತಿದ್ದರೆ ಅಥವಾ ಪರವಾನಿಗೆಯಂತೆ ಕೇವಲ ಪಟಾಕಿಯನ್ನು ಮಾತ್ರ ತಯಾರಿಸುತ್ತಿದ್ದರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಡಲೂರು ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅಭಿನವ್ ತಿಳಿಸಿದ್ದಾರೆ.

ಕೋವಿಡ್ 19 ಹಿನ್ನೆಲೆಯಲ್ಲಿ ಕಾರ್ಖಾನೆ ಕೆಲಸ ಸ್ಥಗಿತಗೊಂಡಿದ್ದು, ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರ ಕೈಗಾರಿಕೆಗಳು ಪುನರಾರಂಭಿಸಲು ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next