Advertisement

ಹಿಮಾಚಲಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಗೂಡ್ಸ್ ವಾಹನ ಏಳು ಮಂದಿ ಸಾವು! ಪ್ರಧಾನಿ ಸಂತಾಪ

12:12 PM Nov 16, 2020 | sudhir |

ಶಿಮ್ಲಾ : ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಬಿದ್ದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಸಂಭವಿಸಿದೆ.

Advertisement

ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಮಾಂಡಿ ಜಿಲ್ಲೆಯ ಫುಲ್ ಗಾರ್ಟ್ ಪ್ರದೇಶದ ಪ್ರವೇಶಿಸುತ್ತಿದ್ದಂತೆ ಸೋಮವಾರ ಮುಂಜಾನೆ ಮೂರು ಗಂಟೆಯ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಸುಕೇತಿ ಖಾಡ್ ಹೊಳೆಗೆ ಬಿದ್ದಿದೆ, ಪರಿಣಾಮ ವಾಹನದಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ನಡೆದ ವಿಚಾರ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಮೂಲಕ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಗಾಯಾಳು ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ:ಸಿಡಿದ ಹೂಕುಂಡ ಪಟಾಕಿ: 12 ವರ್ಷದ ಬಾಲಕಿಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ!

ಘಟನಾ ಸ್ಥಳದಲ್ಲಿ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next