Advertisement

Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು

10:21 PM Oct 12, 2024 | Team Udayavani |

ಕೈಥಲ್‌: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟಿರುವ ಘಟನೆ ಹರ್ಯಾಣದ ಕೈಥಲ್‌ನಲ್ಲಿ ನಡೆದಿದೆ.

Advertisement

ದಸರಾ ಹಿನ್ನೆಲೆಯಲ್ಲಿ ಬಾಬಾ ರಾಜ್‌ಪುರಿ ಮೇಳದಲ್ಲಿ ಭಾಗವಹಿಸುವುದಕ್ಕಾಗಿ ಚಾಲಕ ಸೇರಿದಂತೆ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದಾಗಿ ಮೂವರು ಮಹಿಳೆಯರು ಮತ್ತು ನಾಲ್ವರು ಬಾಲಕಿಯರು ಸಾವನ್ನಪ್ಪಿದ್ದಾರೆ.

ವಾಹನದ ಚಾಲಕನನ್ನು ರಕ್ಷಿಸಲಾಗಿದ್ದು, ಕಾಣೆಯಾಗಿರುವ 12 ವರ್ಷದ ಬಾಲಕಿಯೊಬ್ಬಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next