Advertisement

ಕೊನೇ ಹಂತ : ಪಶ್ಚಿಮ ಬಂಗಾಳದಲ್ಲಿ ಬಾಂಬ್‌,ಪಂಜಾಬ್‌ನಲ್ಲಿ ಗುಂಡಿನ ದಾಳಿ

09:38 AM May 20, 2019 | Vishnu Das |

ಹೊಸದಿಲ್ಲಿ : 7 ನೇ ಮತ್ತು ಕೊನೇಯ ಹಂತದ ಲೋಕಸಭಾ ಚುನಾವಣಾ ಮತದಾನದ ವೇಳೆ ಕೆಲವೆಡೆ ಅಹಿತಕರ ಘಟನೆಗಳು ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ ಎಸೆಯಲಾಗಿದ್ದು, ಹಲವೆಡೆ ಅಭ್ಯರ್ಥಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ. ಪಂಜಾಬ್‌ನ ಮತಗಟ್ಟೆಯೊಂದರಲ್ಲಿ ಗುಂಡಿನದಾಳಿ ನಡೆಸಲಾಗಿದೆ.

Advertisement

ಪಂಜಾಬ್‌ನ ಬಠಿಂಡಾ ದಲ್ಲಿ ಎರಡು ಪಕ್ಷಗಳ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಗುಂಡಿ ನ ದಾಳಿ ನಡೆಸಲಾಗಿದ್ದು, ಓರ್ವ ಗಾಯಗೊಂಡಿದ್ದಾನೆ.

ಪಶ್ಚಿಮ ಬಂಗಾಳದ ಜಾದವ್‌ಪುರ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನುಪಮ್‌ ಹಜ್ರಾ ಅವರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಕಾರಿನ ಗಾಜುಗಳನ್ನು ಜಖಂಗೊಳಿಸಲಾಗಿದೆ.

ಪಂಜಾಬ್‌,ಪಶ್ಚಿಮ ಬಂಗಾಳ ಮತ್ತು ಉತ್ತರಪ್ರದೇಶ ಹಲವೆಡೆ ರಾಜಕೀಯ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗಿರುವ ಕೇಂದ್ರಿಯ ಪಡೆಗಳನ್ನು ಫ‌ಲಿತಾಂಶ ಪ್ರಕಟವಾಗುವವರೆಗೆ ಹಿಂಪಡೆಯಬಾರದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next