Advertisement

Delhi ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ ನಲ್ಲಿ ವಶಕ್ಕೆ

05:54 PM Feb 12, 2024 | Team Udayavani |

ಹುಬ್ಬಳ್ಳಿ: ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಧಾರವಾಡ ಜಿಲ್ಲೆಯ 16 ರೈತರು ಸೇರಿ ಕರ್ನಾಟಕದ 70 ರೈತರನ್ನು ಮಧ್ಯ ಪ್ರದೇಶದ ಭೋಪಾಲ್​ ನಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.ಧಾರವಾಡ ಜಿಲ್ಲೆಯ16 ರೈತರಲ್ಲಿ ಹೆಚ್ಚಿನವರು ಕಲಘಟಗಿ ತಾಲೂಕಿನವರು ಎಂದು ತಿಳಿದು ಬಂದಿದೆ.

Advertisement

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ರೈತರು ದೆಹಲಿಗೆ ತೆರಳುತ್ತಿದ್ದರು.ದೆಹಲಿಯ‌ ಜಂತರ್​ ಮಂತರ್​​ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next