Advertisement

Kerala CM: ಇಸ್ರೇಲ್ ನಲ್ಲಿ ಕೇರಳದ 7000 ಮಂದಿ; ವಿದೇಶಾಂಗ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

01:42 PM Oct 10, 2023 | Team Udayavani |

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಇಸ್ರೇಲ್‌ನಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸ್ತುತ ಆ ದೇಶದಲ್ಲಿರುವ 7,000 ಕೇರಳಿಗರನ್ನು ರಕ್ಷಿಸಲು ಕೇಂದ್ರದ ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

Advertisement

ಇಸ್ರೇಲ್ ನಲ್ಲಿ ಈಗಾಗಲೇ ಕೇರಳದ ಸುಮಾರು 7,000 ಮಂದಿ ವಾಸವಿದ್ದು. ಇಸ್ರೇಲ್ ಹಮಾಸ್ ಸಂಘರ್ಷದಿಂದ ಇಲ್ಲಿನ ನಾಗರಿಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಅಲ್ಲದೆ ಭಾರತದಲ್ಲಿರುವ ಅವರ ಕುಟುಂಬ ಸದಸ್ಯರು ತೀವ್ರ ಆತಂಕದಲ್ಲಿದ್ದಾರೆ. ಹಾಗಾಗಿ ಇಸ್ರೇಲ್‌ನಲ್ಲಿರುವ ನಮ್ಮ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಮಧ್ಯಪ್ರವೇಶಿಸುವಂತೆ ನಾನು ಕೋರುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಶನಿವಾರ ಹಮಾಸ್ ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದ ಸಂದರ್ಭ ಕೇರಳದ ನರ್ಸ್ ಒಬ್ಬರು ಗಂಭೀರ ಗಾಯಗೊಂಡಿದ್ದರು ಈ ಕುರಿತು ಆಕೆಯ ಪತಿ ತನ್ನ ಪತ್ನಿಯ ಅರೋಗ್ಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: DJ Sound: ಜಿಲ್ಲಾ ಪೊಲೀಸ್ ಇಲಾಖೆಯ ದ್ವಂದ್ವ ನಿಲುವು; ಡಿಜೆ ಸೌಂಡ್ ಗೆ ಮೃತಪಟ್ಟ ಯುವಕ

Advertisement

Udayavani is now on Telegram. Click here to join our channel and stay updated with the latest news.

Next