Advertisement

79, 29ಕ್ಕೆ ಬರುತ್ತದೆ ….: ಡಿಕೆಶಿ ವಿರುದ್ಧ ಕಿಡಿ ಕಾರಿದ ಹೆಚ್ ಡಿಕೆ

09:36 PM Mar 01, 2023 | Team Udayavani |

ಮೂಡಿಗೆರೆ: ಅವರು ರೈತನ ಮಗನಾ? ರೈತರ ಮಕ್ಕಳಿಗೆ ಇಡಿ ನೋಟಿಸು ಕೊಟ್ಟಿರುವುದನ್ನ ಎಲ್ಲಾದರೂ ನೋಡಿದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬುಧವಾರ ಕಿಡಿ ಕಾರಿದ್ದಾರೆ.

Advertisement

ಹಾಸನದಲ್ಲಿ ಡಿಕೆಶಿ ಅವರು ನೀಡಿದ ಹೇಳಿಕೆ ಕುರಿತು ಕೆಂಡಮಂಡಲರಾದ ಕುಮಾರಸ್ವಾಮಿ ಅವರು, ಓರ್ವ ಮುಖ್ಯಮಂತ್ರಿಯನ್ನ ಚಪ್ರಾಸಿ ತರ ನಡೆಸಿಕೊಂಡಿರಿ. ಅವರು ಯಾರ ಪೂಜೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದರೆ, 79, 29ಕ್ಕೆ ಬರುತ್ತದೆ. ಅವರಿಗೆ ಇನ್ನೂ ದುಡ್ಡು ಹೊಡೆಯಲು ಬಿಡಬೇಕಿತ್ತಂತಾ. ನನ್ನನ್ನ ಯಾವ ರೀತಿ ನಡೆಸಿಕೊಂಡರು ಎಂಬುವುದು ಗೊತ್ತಿದೆ. ಇರಿಗೇಶನ್ ಸಚಿವನಾಗಿ ಏನೇನೋ ನಡೆಸಿದ್ದೀಯ ಗೊತ್ತಿದೆ ಕಣಪ್ಪಾ ನಿನ್ನ ಬಂಡವಾಳ. ಮಗೆ ಎಷ್ಟು ಸ್ವತಂತ್ರ ಕೊಟ್ಟಿದ್ದೆ, ನೀವು ಯಾವ ರೀತಿ ನಡೆಸಿಕೊಂಡಿರಿ. ನಾವೇನು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವಾ, ಹುಡುಕಿಕೊಂಡು ಬಂದವರು ನೀವು. ಸಿಎಂ ಸ್ಥಾನ ಕೊಡುತ್ತೇವೆ ಬನ್ನಿ ಅಂತ, ಬೇಡ ಯಾರನ್ನಾದರೂ ಮಾಡಿಕೊಳ್ಳಿ ಅಂತ ಹೇಳಿದ್ದೇವಲ್ಲಾ ಅವರು ಜೀವಂತ ಇಲ್ವಾ ಎಂದು ಕಿಡಿ ಕಾರಿದರು.

ನಿಮಗೆ ಶಕ್ತಿ ಇದ್ದರೆ ಯಾಕೆ ಜೆಡಿಎಸ್ ನಾಯಕರುಗಳ ಮನೆಯ ಬಾಗಿಲನ್ನ ತಟ್ಕೊಂಡಿದ್ದೀರಾ? ನನ್ನ ಬಗ್ಗೆ ಲಘುವಾಗ ಮಾತನಾಡುತ್ತೀರಿ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಡಿಕೊಳ್ಳಿ ಅಂತ ನಾವು ಹೇಳಿಲ್ವಾ. ಜೀವಂತವಾಗಿ ಯಾರು ಬದುಕಿಲ್ವಾ, ದೇವೇಗೌಡರ ಸಮ್ಮುಖದಲ್ಲಿ ಮಾತನಾಡಿದ್ದನ್ನ ಹೇಳಲಿಕ್ಕೆ, ನಿಮಗೆ ಯಾವ ರೀತಿ ನೈತಿಕತೆ ಇದೆ ಜೆಡಿಎಸ್ ಬಗ್ಗೆ ಮಾತನಾಡಲಿಕ್ಕೆ ಎಂದು ಕಿಡಿ ಕಿಡಿಯಾದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next