Advertisement

79 ಕೈದಿಗಳ ಬಿಡುಗಡೆ ಇಂದು

07:00 AM Sep 09, 2018 | |

ಬಳ್ಳಾರಿ: ರಾಜ್ಯದ 8 ಕೇಂದ್ರ ಕಾರಾಗೃಹಗಳಲ್ಲಿರುವ 79 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಸೆ.9 ರಂದು
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisement

ಸನ್ನಡತೆ ಆಧಾರದ ಮೇಲೆ ಪ್ರಸಕ್ತ ವರ್ಷ ಎರಡನೇ ಬಾರಿಗೆ ಕೈದಿಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ಕಳೆದ ಮಾರ್ಚ್‌ನಲ್ಲಿ ಒಮ್ಮೆ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆಗೊಳಿಸಲಾಗಿತ್ತು.

ಅದೇ ರೀತಿ ಸ್ವಾತಂತ್ರ ದಿನಾಚರಣೆಯಂದು ಕೈದಿಗಳನ್ನು ಬಿಡುಗಡೆ ಮಾಡಬೇಕಾಗಿತ್ತಾದರೂ ಕೆಲ ಕಾರಣಗಳಿಂದ ಬಿಡುಗಡೆ ಮಾಡಿಲ್ಲ. ಇದೀಗಬಳ್ಳಾರಿ, ಮೈಸೂರು, ಬೆಂಗಳೂರು, ವಿಜಯಪುರ, ಬೆಳಗಾವಿ, ಧಾರವಾಡ, ಕಲಬುರಗಿ ಸೇರಿ ರಾಜ್ಯದ ಒಟ್ಟು 8 ಕೇಂದ್ರ ಕಾರಾಗೃಹದ 79 ಕೈದಿಗಳು ಜೈಲುವಾಸದಿಂದ ಮುಕ್ತರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next