Advertisement
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 7ನೇ ಆರ್ಥಿಕ ಗಣತಿಯ ಕ್ಷೇತ್ರ ಕಾರ್ಯಾಚರಣೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಕೃಷಿ ಹಾಗೂ ಕೃಷಿಯೇತರ ಉದ್ಯಮಗಳ ಪಟ್ಟಿಯನ್ನು ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ತಯಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ಆರ್ಥಿಕ ಗಣತಿಯಲ್ಲಿ ಗಣತಿದಾರರು ತಮಗೆ ನಿರ್ದಿಷ್ಟ ಪಡಿಸಿದ, ಗಡಿಯೊಳಗೆ ಬರುವ ಪ್ರತಿ ಮನೆ, ಕಟ್ಟಡಗಳಿಗೂ ಭೇಟಿ ನೀಡುವುದರ ಮೂಲಕ ಅಲ್ಲಿ ನಡೆಯುವ ಉದ್ಯಮ ಅಥವಾ ವ್ಯಾಪಾರ ಘಟಕಗಳ, ಮಾಲೀಕರ ಲಿಂಗವಾರು, ಸಾಮಾಜಿಕ ಪಂಗಡವಾರು ಮಾಹಿತಿಯನ್ನು, ಉದ್ಯಮವಾರು ಕೆಲಸಗಾರರ ಮಾಹಿತಿ, ಉದ್ಯಮಿ ಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಯನ್ನು ಕಲೆ ಹಾಕುತ್ತಾರೆ ಎಂದರು.
Related Articles
Advertisement
ಗಣತಿ ಸಂದರ್ಭದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಹಂತದ ಅಧಿಕಾರಿ, ಸಿಬ್ಬಂದಿಗಳಿಂದ ಸೂಕ್ತ ಸಹಕಾರ ಅಗತ್ಯವಾಗಿದೆ ಎಂದರು. ರೇಖಾ ಬಿ. ಶೆಟ್ಟರ, ಪಿ.ಜಿ. ಕುಲಕರ್ಣಿ, ವೀರೇಶ ಪುರಾಣಿಕ, ಕಿರಣ ಜೋಶಿ ಉಪಸ್ಥಿತರಿದ್ದರು.