Advertisement

7ನೇ ವೇತನ ಆಯೋಗ: ಶೀಘ್ರ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

09:22 PM Nov 06, 2022 | Team Udayavani |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ರಚಿಸುವ ಸಂಬಂಧ ಎರಡೂ¾ರು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Advertisement

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಭಾನುವಾರ ಭೇಟಿ ಮಾಡಿ, ವೇತನ ಆಯೋಗವನ್ನು ಕೂಡಲೇ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, 7ನೇ ವೇತನ ಆಯೋಗ ರಚನೆ ಸಂಬಂಧ ಇನ್ನೂ ಎರಡೂ¾ರು ದಿನಗಳಲ್ಲಿ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿಗೆ ತಿಳಿಸಿದ್ದಾರೆ.

ನ.10ರಂದು ಸಿಎಂಗೆ ಅಭಿನಂದನೆ: ಏಳನೇ ವೇತನ ಆಯೋಗದ ರಚನೆ ಬಗ್ಗೆ ದೃಢ ನಿರ್ಧಾರ ಕೈಗೊಂಡ ಮುಖ್ಯಮಂತ್ರಿಯವರನ್ನು ಸಂಘದ ವತಿಯಿಂದ ನ.10ರಂದು ಮುಖ್ಯಮಂತ್ರಿಯವರನ್ನು ಅಭಿನಂದಿಸಲಾಗುವುದು.

ಮುಖ್ಯಮಂತ್ರಿಯವರ ರೇಸ್‌ಕೋರ್ಸ್‌ ರಸ್ತೆಯ ಅಧಿಕೃತ ನಿವಾಸದಲ್ಲಿ ನ.10ರಂದು ಬೆಳಗ್ಗೆ 10.30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಷಡಾಕ್ಷರಿ ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next