Advertisement

8.4 ಲಕ್ಷ ಮೌಲ್ಯದ ಅಕ್ಕಿ ಜಪ್ತಿ

05:31 PM Oct 13, 2021 | Shwetha M |

ನಿಡಗುಂದಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಾಲೂಕಾಡಳಿತ ಹಾಗೂ ಪೊಲೀಸರು ಜಂಟಿಯಾಗಿ ವಶಪಡಿಸಿಕೊಂಡ ಘಟನೆ ತಾಲೂಕಿನ ಯಲಗೂರ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ತಮಿಳುನಾಡು ಮೂಲದ ಲಾರಿಯಾಗಿದ್ದು, ಲಿಂಗಸೂರದ ಅಂಜನಾದ್ರಿ ಟ್ರೇಡರ್ನಿಂದ ಪಡಿತರ ಅಕ್ಕಿಯುಳ್ಳ ಚೀಲ ತೆಗೆದುಕೊಂಡು ಗುಜರಾತ್‌ ರಾಜ್ಯದ ಜೆತಲಪುರಕ್ಕೆ ಲಾರಿ ಹೊರಟಿತ್ತು. ಲಾರಿ ಚಾಲಕ ನಾಮಕಲ್‌ ಜಿಲ್ಲೆಯ ಪರಮತಿ-ವೆಲ್ಲೂರ ತಾಲೂಕಿನ ಕೊಡಚ್ಚೇರ ಗ್ರಾಮದ ಸರವಣ ಎಸ್‌ ಸಂಗೋಡನನನ್ನು ಬಂಧಿಸಲಾಗಿದ್ದು ಲಾರಿಯನ್ನು ನಿಡಗುಂದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾರಿಯಲ್ಲಿ 575 ಚೀಲಗಳಲ್ಲಿ ಇದ್ದ 28,750 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ 8,45,250 ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಅಕ್ಕಿ ಸರಕಾರ ನಾನಾ ಯೋಜನೆಗೆ ಹಂಚಿಕೆಯಾದ ಪಡಿತರ ಅಕ್ಕಿಯಾಗಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್‌ ಸತೀಶ ಕೂಡಲಗಿ ಮಾರ್ಗದರ್ಶನದಲ್ಲಿ ಆಹಾರ ನಿರೀಕ್ಷಕ ಸಂಜಯ ಪಾಟೀಲ, ಲೋಕೇಶ ಕುಪ್ಪಸ್ತ, ಅಪ್ಪಾಸಾಹೇಬ ಘಂಟಿ, ಪೊಲೀಸ್‌ ಪೇದೆಗಳು ಪಾಲ್ಗೊಂಡಿದ್ದರು. ಆಹಾರ ನಿರೀಕ್ಷಕ ಸಂಜಯ ಪಾಟೀಲ ಈ ಕುರಿತು ಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next