Advertisement

ಮಿಜೋರಾಂ: ಕಲ್ಲು ಕ್ವಾರಿ ಕುಸಿದು 8 ಮಂದಿ ಸಾವು, ನಾಲ್ವರು ನಾಪತ್ತೆ, ರಕ್ಷಣಾ ಕಾರ್ಯ ಚುರುಕು

08:34 AM Nov 15, 2022 | Team Udayavani |

ಮಿಜೋರಾಂ : ಸೋಮವಾರ ಮಿಜೋರಾಂನಲ್ಲಿ ಕಲ್ಲಿನ ಗಣಿ ಕುಸಿದ ಪರಿಣಾಮ 12 ಕಾರ್ಮಿಕರು ಸಿಕ್ಕಿಬಿದ್ದಿದ್ದು ಇದುವರೆಗೆ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ, ಉಳಿದ ನಾಲ್ವರು ಕಲ್ಲಿನ ರಾಶಿಯಡಿ ಸಿಲುಕಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.

Advertisement

ಮೃತರೆಲ್ಲರೂ ಬಿಹಾರದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಎಸ್‌ಡಿಆರ್‌ಎಫ್, ಬಿಎಸ್‌ಎಫ್ ಮತ್ತು ಅಸ್ಸಾಂ ರೈಫಲ್ಸ್ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಮಿಜೋರಾಂನ ಹನತಿಯಾಲ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಹಠಾತ್ ಅವಘಡದಿಂದಾಗಿ ಅಲ್ಲಿದ್ದ ಕಾರ್ಮಿಕರಿಗೆ ಪಾರಾಗುವ ಅವಕಾಶವೂ ಸಿಗಲಿಲ್ಲ. ಸುದ್ದಿ ತಿಳಿದ ತಕ್ಷಣ ಸಮೀಪದ ಗ್ರಾಮಗಳ ಜನರು ಆಗಮಿಸಿ ಸಿಕ್ಕಿಬಿದ್ದವರನ್ನು ರಕ್ಷಿಸುವ ಪ್ರಯತ್ನ ಆರಂಭಿಸಿದರು.

ಬಳಿಕ ಠಾಣೆಗೆ ದೂರು ನೀಡಲಾಗಿದ್ದು ಈ ವೇಳೆ ಸ್ಥಳಕ್ಕೆ ಬಂದ ಎಸ್‌ಡಿಆರ್‌ಎಫ್, ಬಿಎಸ್‌ಎಫ್ ಮತ್ತು ಅಸ್ಸಾಂ ರೈಫಲ್ಸ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಇದನ್ನೂ ಓದಿ :ಹೃದಯಾಘಾತದಿಂದ ಮಹೇಶ್‌ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next