Advertisement

ಜನಾರ್ದನ ರೆಡ್ಡಿ ಆಪ್ತ ಅಲಿಖಾನ್‌ 8 ದಿನಗಳ ಕಾಲ ಸಿಸಿಬಿ ವಶಕ್ಕೆ 

05:10 PM Nov 22, 2018 | Team Udayavani |

ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದ ಐದನೇ ಆರೋಪಿ ಅಲಿಖಾನ್‌ನನ್ನು 8 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ  1ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ನೀಡಿದೆ. 

Advertisement

ಸಿಸಿಬಿ ಪೊಲೀಸರು ಅಲಿಖಾನ್‌ನನ್ನು ಕೋರ್ಟ್‌ಗೆ ಹಾಜರು ಪಡಿಸಿ 14 ದಿನ ವಶಕೆಕ ನೀಡುವಂತೆ ಕೋರಿದ್ದರು. ಆದರೆ ಕೋರ್ಟ್‌ 8 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ, ಮಾತ್ರವಲ್ಲದೆ ಹಿಂಸೆ ನೀಡದೆ , ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಮುಂದೂಡಿದೆ. 

ಅಲಿಖಾನ್‌ ಪರ ವಕೀಲರು ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿ ಅಲಿಖಾನ್‌ಗೆ ಪೊಲೀಸರು ಹಿಂಸೆ ನೀಡುತ್ತಿದ್ದಾರೆ. ವಕೀಲರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. 

ಅಲಿಖಾನ್‌ ಆ್ಯಂಬಿಡೆಂಟ್‌ ಕಂಪೆನಿ ಮೂಲಕ 57 ಕೆ.ಜಿ ಚಿನ್ನದ ಗಟ್ಟಿ ಸ್ವೀಕರಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಲುಪಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next