Advertisement

8 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಶಿರಸಿ ಉರಗ ತಜ್ಞ ಪ್ರಶಾಂತ ಹುಲೇಕಲ್   

07:52 PM Sep 21, 2021 | Team Udayavani |

ಶಿರಸಿ : ತಾಲೂಕಿನ ಸರನ್ಗದ್ದೆಯ ಕೃಷ್ಣ ಅಚಾರಿ ಮನೆಯ ಛಾವಣಿಯಲ್ಲಿ ಅಡಗಿದ್ದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು ಮಂಗಳವಾರ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Advertisement

ಮನೆಯ ಛಾವಣಿಯಲ್ಲಿ ಹೆಂಚಿನಡಿ ಸೇರಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಶಾಂತ ಹುಲೇಕಲ್  ಅವರು ಅತ್ಯಂತ ಸಾಹಸ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಸೆರೆ ಹಿಡಿದರು. ನಂತರ ಶಿವಗಂಗಾ ಫಾಲ್ಸ ಬಳಿಯ ನಿರ್ಜನ ಪ್ರದೇಶದ ರಕ್ಷಿತಾರಣ್ಯದಲ್ಲಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ಹುಲೇಕಲ್ ವಲಯ ಆರ್ ಎಫ್ಒ ಮಂಜುನಾಥ ಹೆಬ್ಬಾರ, ಡಿವೈಆರ್ಎಫ್ಓ ರಾಘವೇಂದ್ರ ಹೆಗಡೆ, ಅರಣ್ಯ ರಕ್ಷಕ ರಾಜೇಶ ನಾಯ್ಕ, ದಾವಲಸಾಬ ಎರಗಟ್ಟಿ, ವಾಹನ ಚಾಲಕ ನಾಗರಾಜ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next