Advertisement

ಬೆಳಗಾವಿಯ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು, ಮೂವರು ಬಚಾವ್

01:39 PM Apr 15, 2017 | Team Udayavani |

ಮುಂಬೈ: ಬೀಚ್ ನಲ್ಲಿ ಈಜಲು ತೆರಳಿದ್ದ ಬೆಳಗಾವಿ ಮೂಲದ 8 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲಾದ ದುರಂತ ಶನಿವಾರ ಮಹಾರಾಷ್ಟ್ರದ ಸಿಂಧದುರ್ಗ ಸಮೀಪದ ಮಾಲ್ವಾನ್ ವಾಯರಿ ಬೀಚ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಬೆಳಗಾವಿ ಮರಾಠ ಮಂಡಳದ ಇಂಜಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಹಾರಾಷ್ಟ್ರ ವೈರ್ ಬೀಚ್ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ವಾಯರಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ 8 ಮಂದಿ ನೀರು ಪಾಲಾಗಿರುವುದಾಗಿ ವರದಿ ವಿವರಿಸಿದೆ.

ಶುಕ್ರವಾರ ಬೆಳಗಾವಿ ಇಂಜಿನಿಯರಿಂಗ್ ಕಾಲೇಜಿನ 40 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ 8 ಮಂದಿ ನೀರು ಪಾಲಾಗಿದ್ದಾರೆ. ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಐವರು ವಿದ್ಯಾರ್ಥಿಗಳ ಹಾಗೂ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next