Advertisement

ಕಂಚು ಗೆದ್ದ ಗುರುರಾಜ ಅವರಿಗೆ 8 ಲಕ್ಷ ರೂ. ಪುರಸ್ಕಾರ: ಸಚಿವ ಡಾ.ನಾರಾಯಣ ಗೌಡ

08:06 PM Jul 30, 2022 | Team Udayavani |

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕನ್ನಡಿಗ ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಅವರು ಅಭಿನಂದನೆ ಸಲ್ಲಿಸಿ 8 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಿಸಿದ್ದಾರೆ.

Advertisement

ಪುರುಷರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಸಂಕೇತ್ ಸರ್ಗರ್ ಅವರಿಗೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪುರುಷರ 61 ಕೆಜಿ ವಿಭಾಗದಲ್ಲಿ ಕನ್ನಡಿಗ , ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ ಪೂಜಾರಿ ಶನಿವಾರ ಕಂಚಿನ ಪದಕ ಗೆದ್ದಿದ್ದಾರೆ.

ಈ ಪದಕದೊಂದಿಗೆ ಭಾರತಕ್ಕೆ ಎರಡನೇ ಪದಕವನ್ನು ಗುರುರಾಜ ನೀಡಿದ್ದಾರೆ. ಗುರುರಾಜ ಒಟ್ಟು 269 ಕೆಜಿ ಎತ್ತುವ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next