Advertisement

Govt Hospital: ಸರ್ಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಸಾವು; ಆಮ್ಲಜನಕ ಪೊರೈಕೆ ಕೊರತೆ ಆರೋಪ

08:56 AM Jul 23, 2023 | Team Udayavani |

ಹೈದರಾಬಾದ್: ಒಂದೇ ಆಸ್ಪತ್ರೆಯಲ್ಲಿ 8 ರೋಗಿಗಳು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Advertisement

ಆಂಧ್ರಪ್ರದೇಶದ ನೆಲ್ಲೂರುನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಮೃತಪಟ್ಟಿದ್ದಾರೆ. ಆಮ್ಲಜನಕದ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳೇ ಆಕ್ಸಿಜನ್‌ ಪೊರೈಕೆಯ ಕೊರತೆಗೆ ಕಾರಣವೆಂದು ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ಅಲ್ಲಗೆಳೆದಿದ್ದು, ಯಾವುದೇ ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿಲ್ಲ. ರೋಗಿಗಳಿಗೆ ಸಂಬಂಧಿಸಿದ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಂಟು ರೋಗಿಗಳಲ್ಲಿ 6 ರೋಗಿಗಳನ್ನು ಐಸಿಯು ವಾರ್ಡ್‌ ನಲ್ಲಿ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಈ ಘಟನೆ ಸಂಬಂಧ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು ಸೂಕ್ತ ತನಿಖೆ ನಡೆಸಿದ್ದು, ಎಂಟು ಜನರ ಸಾವು ಆಮ್ಲಜನಕದ ಕೊರತೆಯಿಂದ ಆಗಿಲ್ಲ. ಬದಲಾಗಿ ರೋಗಿಗಳ ಸಾವಿಗೆ ಇತರ ವೈದ್ಯಕೀಯ ಕಾರಣವನ್ನು ವರದಿಯಲ್ಲಿ ಉಲ್ಲೇಖಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next