Advertisement

ಅತೃಪ್ತ ಶಾಸಕರ ರಾಜೀನಾಮೆ ಸದ್ಯಕ್ಕೆ ಅಂಗೀಕಾರವಿಲ್ಲ

02:03 PM Jul 12, 2019 | Nagendra Trasi |

ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ ಎಂದು ವಿಧಾನಸಭಾಧ್ಯಕ್ಷರಾಗಿರುವ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಅತೃಪ್ತ ಶಾಸಕರು ಸಲ್ಲಿಸಿರುವ ರಾಜೀನಾಮೆ ಕುರಿತಾಗಿರುವಂತೆ ಗುರುವಾರ ಸಂಜೆಯೊಳಗೆ ಕರ್ನಾಟಕ ವಿಧಾನಸಭಾಧ್ಯಕ್ಷರು ತಮ್ಮ ನಿರ್ಧಾರವನ್ನು ಪ್ರಕಟಿಸಬೇಕೆಂದು ಸರ್ವೋಚ್ಛ ನ್ಯಾಯಾಲವು ನೀಡಿರುವ ಆದೇಶಕ್ಕೆ ಅನುಗುಣವಾಗಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಸಲ್ಲಿಸಿದ್ದ ಶಾಸಕರ ಪೈಕಿ ಮುಂಬಯಿ ಹೊಟೇಲಲ್ಲಿ ತಂಗಿದ್ದವರು ಇಂದು ಆರು ಗಂಟೆಯ ಒಳಗೆ ಬೆಂಗಳೂರಿಗೆ ಆಗಮಿಸಿ ವಿಧಾನಸಭಾದ್ಯಕ್ಷರನ್ನು ಭೇಟಿಯಾಗಿ ತಾವು ರಾಜೀನಾಮೆ ನೀಡಿರುವ ಉದ್ದೇಶವನ್ನು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next