Advertisement

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಿದ ಡಿಸಿ

09:12 AM Jan 16, 2020 | Team Udayavani |

ಕಲಬುರಗಿ:  ಕಲಬುರಗಿಯಲ್ಲಿ ಬರುವ ಫೆ. 5,6 ಹಾಗೂ 7ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶರತ್ .ಬಿ ಅವರು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿ ಮಕರ ಸಂಕ್ರಾತಿ ಶುಭಾಶಯ ಕೋರಿದರು.

Advertisement

ಒಂದು ತಿಂಗಳ ವೇತನ ನೀಡಿದ ಡಿಸಿ:  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಮಾನ್ಯ ಜಿಲ್ಲಾಧಿಕಾರಿಗಳಾದ ಶರತ್ .ಬಿ ಅವರು ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕಸಾಪ  ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಚೆಕ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next