Advertisement

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬದ್ಧ: ಕಾರಜೋಳ

09:54 AM Nov 10, 2019 | Sriram |

ಕಲಬುರಗಿ: ಇಲ್ಲಿ ನಡೆಸಲು ಉದ್ದೇಶಿಸಿರುವ ಅಖಿಲ ಭಾರತ 85 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬದ್ಧವಿರುವುದಾಗಿ ಡಿಸಿಎಂ, ಲೋಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸಾಪ ಅಧ್ಯಕ್ಷರು ದಿನಾಂಕ ಅಂತಿಮಗೊಳಿಸಿದ ನಂತರ ಮುಂದಿನ ಕಾರ್ಯಚಟುವಟಿಕೆಗಳು ಆರಂಭವಾಗಲಿವೆ. ಒಟ್ಟಾರೆ ಸಮ್ಮೇಳನ ಸಿದ್ದತೆಗಳನ್ನು ಕೈಗೊಳ್ಳಲು ಹಿಂದೇಟು ಹಾಕಲಾಗದು. ಸಮ್ಮೇಳನದ ದಿನಾಂಕದ ಸ್ವಾಗತ ಸಮಿತಿ ರಚಿಸಲಾಗುವುದು ಎಂದರು.

‘ವಸತಿ ನಿಲಯಗಳ ಹೆಚ್ಚುವರಿ ಕೊಠಡಿಗೆ ₹ 140 ಕೋಟಿ’. : ರಾಜ್ಯದಾದ್ಯಂತ ಇರುವ ಸಮಾಜ ಕಲ್ಯಾಣ ‌ಇಲಾಖೆಯ ವಸತಿ ನಿಲಯಗಳಲ್ಲಿ ಹೆಚ್ಚುವರಿ ಕೊಠಡಿ, ಬಚ್ಚಲುಮನೆ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ₹ 140 ಕೋಟಿ ಮೊತ್ತದ ಕ್ರಿಯಾಯೋಜನೆ ತಯಾರಿಸಲಾಗಿದೆ ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದರು.

ವರ್ಷದಿಂದ ವರ್ಷಕ್ಕೆ ವಸತಿನಿಲಯಗಳಲ್ಲಿ ಇದ್ದುಕೊಂಡು ಅಧ್ಯಯನ ‌ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅವರಿಗೆ ಉತ್ತಮ ಓದುವ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ನವೆಂಬರ್ ನಲ್ಲೇ ವಿಮಾನ ನಿಲ್ದಾಣ ಆರಂಭ: ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ವಿಮಾನ ‌ನಿಲ್ದಾಣದ ಉದ್ಘಾಟನೆ ಇದೇ ತಿಂಗಳು ನೆರವೇರಲಿದೆ. ಪ್ರಧಾನಿ ಅವರನ್ನು ಆಹ್ವಾನಿಸಲಾಗಿದ್ದು, ದಿನಾಂಕ ಸಿಕ್ಕ ಕೂಡಲೇ ಉದ್ಘಾಟನೆ ನಡೆಯಲಿದೆ ಎಂದರು.

Advertisement

ಸರ್ಕಾರ ಸತ್ತಿದ್ದರೆ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಸಾಧ್ಯವಿತ್ತೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೊದಲ ಬಾರಿಗೆ ಯಡಿಯೂರಪ್ಪ ಸರ್ಕಾರ ಎನ್ ಡಿಆರ್ ಎಫ್ ನ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಪರಿಹಾರ ನೀಡಿದೆ. ಸಿದ್ದರಾಮಯ್ಯ ಅವರು ಈ ರೀತಿ ಎಂದಾದರೂ ಮಾಡಿದ್ದರೆ ಎಂದು ಪ್ರಶ್ನಿಸಿದರು.

ಕಲಬುರಗಿ ನಗರದಲ್ಲಿ ಐತಿಹಾಸಿಕ ಬಹಮನಿ ಕೋಟೆಯ ಒತ್ತುವರಿ ತೆರವುಗೊಳಿಸುವ ಸಂಬಂಧ ಶೀಘ್ರವೇ ಸಭೆ ಕರೆಯುತ್ತೇನೆ ಎಂದು ಕಾರಜೋಳ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next