Advertisement

ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾಗೆ 86 ಯೋಧರು, 6 ಬೆಂಗಾವಲು ಪಡೆ ಭದ್ರತೆ

01:48 PM Aug 02, 2022 | Team Udayavani |

ಕೋಲ್ಕತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಟಿಎಂಸಿ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಆಪ್ತೆ ಅರ್ಪಿತಾ ಮುಖರ್ಜಿಯನ್ನು ಪ್ರತಿ 48 ಗಂಟೆಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕೆಂದು ಕೋರ್ಟ್ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ 6 ಬೆಂಗಾವಲು ಪಡೆ ವಾಹನ ಮತ್ತು 86 ಯೋಧರ ಬಿಗಿ ಭದ್ರತೆಯಲ್ಲಿ ಪಾರ್ಥ, ಅರ್ಪಿತಾಳನ್ನು ಇಎಸ್ ಐ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಸಾಗರ: ಅಬ್ಬರದ ಮಳೆ ಹಿನ್ನಲೆ; ತುಂಬಿ ಹರಿಯುತ್ತಿರುವ ಇರುವಕ್ಕಿ ಸೇತುವೆ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಇಬ್ಬರನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು. ಮಂಗಳವಾರ (ಆಗಸ್ಟ್ 02) ಬೆಳಗ್ಗೆ ಪಾರ್ಥ ಮತ್ತು ಅರ್ಪಿತಾಳನ್ನು ಇಎಸ್ ಐ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ವರದಿ ವಿವರಿಸಿದೆ.

ಪಾರ್ಥ ಮತ್ತು ಅರ್ಪಿತಾ ಸೇರಿದಂತೆ ಇಬ್ಬರನ್ನೂ ಕೋರ್ಟ್ ಹತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಿತ್ತು. ಪಾರ್ಥ ಆಪ್ತೆ ಅರ್ಪಿತಾ ನಿವಾಸದಲ್ಲಿ ಸುಮಾರು 50 ಕೋಟಿ ರೂಪಾಯಿಯಷ್ಟು ನಗದು ಹಾಗೂ 5 ಕೆಜಿಗೂ ಅಧಿಕ ಚಿನ್ನವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ವಿಚಾರಣೆ ಪೂರ್ಣಗೊಂಡಿದ್ದು, ಬುಧವಾರ ಕೋರ್ಟ್ ಗೆ ವರದಿ ಸಲ್ಲಿಸಲಾಗುವುದು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಆರೋಪದ ಬಗ್ಗೆ ಪಾರ್ಥ ತನಗೇನೂ ಗೊತ್ತಿಲ್ಲ ಎಂದು ಹೇಳುತ್ತಿರುವುದಾಗಿ ಇ.ಡಿ ಅಧಿಕಾರಿಗಳು ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next