Advertisement

ದಕ್ಷಿಣ ಕನ್ನಡ: 26 ವರ್ಷದ ಯುವಕ ಕೋವಿಡ್ -19 ಸೋಂಕಿಗೆ ಬಲಿ

04:04 PM Jun 14, 2020 | keerthan |

ಮಂಗಳೂರು: ಕೋವಿಡ್-19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟನೇ ಬಲಿಯಾಗಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ 26  ವರ್ಷದ ಯುವಕ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Advertisement

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26ರ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26 ವರ್ಷದ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಯುವಕನಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಆ ವೇಳೆ ಆತನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಎಂಟನೇ ಬಲಿಯಾಗಿದೆ. ಇದರಲ್ಲಿ ಏಳು ಮಂದಿ ಸೋಂಕಿನ ಕಾರಣದಿಂದ ಬಲಿಯಾಗಿದ್ದರೆ, ಓರ್ವ ಸೋಂಕಿತ ಅನ್ಯ ಕಾರಣದಿಂದ ಮರಣ ಹೊಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next