Advertisement

ನಾರಾಯಣಪುರದಲ್ಲಿ 9 ಸೆಂ. ಮೀ.ಮಳೆ

11:25 PM Jul 17, 2019 | Team Udayavani |

ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಕೊಪ್ಪಳ ಜಿಲ್ಲೆಯ ಕುಕನೂರು ಮತ್ತು ಯಾದಗಿರಿ ಜಿಲ್ಲೆಯ ನಾರಾಯಣಪುರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 9 ಸೆಂ.ಮೀ.ಮಳೆ ಸುರಿಯಿತು.

Advertisement

ಇದೇ ಅವಧಿಯಲ್ಲಿ ತಾಳಿಕೋಟೆ, ಕುಂದಾಪುರ, ಕೊಪ್ಪಳ, ಕೃಷ್ಣರಾಜಪೇಟೆ, ಕೂಡ್ಲಿಗಿ, ಮಸ್ಕಿ, ಆಗುಂಬೆ, ಶ್ರವಣಬೆಳಗೊಳ, ಸಿರಗುಪ್ಪ, ಹಗರಿಬೊಮ್ಮನಹಳ್ಳಿ, ದಾವಣಗೆರೆ, ರಾಯಚೂರು, ಮೈಸೂರು, ನಾಗಮಂಗಲ ಸೇರಿ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.

ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next