Advertisement

ಕೊಚ್ಚಿ ಹೋದ ಸೇತುವೆ : ಸಂಪರ್ಕ ಕಳೆದುಕೊಂಡ 9 ಕುಗ್ರಾಮಗಳು  

07:24 PM Jul 22, 2021 | Team Udayavani |

ಅಂಕೋಲಾ: ಕಳೆದ ಕೆಲ ದಿನಗಳಿಂದ ತಾಲೂಕಿನ್ನೆಲ್ಲೆಡೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಹಳ್ಳದ ರಭಸಕ್ಕೆ ಹಟ್ಟಿಕೇರಿಯಿಂದ ಕುಗ್ರಾಮಕ್ಕೆ ಸಂಪರ್ಕಿಸುವ ಬಿದಿರಿನ ಸೇತುವೆ ಕೊಚ್ಚಿಹೋಗಿದ್ದು, 9 ಕುಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

Advertisement

ತಾಲೂಕಿನ ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯಲ್ಲಿ ಗೂಳೆ, ಕೆಂದಗಿ, ಲಕ್ಕೆಗುಳಿ, ಸಿಕಳಿ, ತುರ್ಲಿ, ಮಲಗದ್ದೆ, ಹೀರೆಮನೆ, ಕೋಟೆಬಾವಿ, ಮನ್ನಾಣಿ ಗ್ರಾಮಗಳು ಅಕ್ಷರಶಃ ಸಂಪರ್ಕ ಕಳೆದುಕೊಂಡಿವೆ. ಈ ಎಲ್ಲಾ ಗ್ರಾಮಗಳಲ್ಲಿ 400 ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬಿದಿರಿನ ಸೇತುವೆ ಕೊಚ್ಚಿ ಹೋದ ಪರಿಣಾಮ ಈ ಗ್ರಾಮದ ನಾಗರಿಕರು ದಿಗ್ಬಂಧನಕ್ಕೊಳಗಾದಂತಾಗಿದೆ. ಮಳೆಗಾಲ ಆರಂಭವಾಗುತ್ತಲೇ ಹಟ್ಟಿಕೇರಿಯಿಂದ ಈ 9 ಗ್ರಾಮಗಳ ಸಂಪರ್ಕಕ್ಕೆ ಸೇರುವ ಮಧ್ಯೆ ಇದ್ದ ಹಳ್ಳ ತುಂಬಿ ಹರಿಯುತ್ತದೆ. ಇಲ್ಲಿ ಗ್ರಾಮಸ್ಥರೆ ಕೂಡಿಕೊಂಡು ಬೀದರಿನ ಸೇತುವೆ ತಾತ್ಕಾಲಿಕವಾಗಿ ನಿರ್ಮಿಸಿಕೊಂಡು ಮೂಲಭೂತ ಅವಶ್ಯಕತೆಗೆ ಹಟ್ಟಿಕೇರಿಗೆ ಹೋಗಿ ಬರುತ್ತಿದ್ದರು. ಆದರೆ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು 9 ಕುಗ್ರಾಮಗಳಲ್ಲಿ ಭಯದ ಕಾರ್ಮೋಡ ಕವಿದಿದೆ.

ಈ ಗ್ರಾಮಗಳಿಗೆ ಸಾಗಲು ಪ್ರಮುಖವಾಗಿ 5 ಸೇತುವೆಗಳ ಅವಶ್ಯಕತೆ ಇದೆ. ಈಗಾಗಲೇ ಶಾಸಕಿ ರೂಪಾಲಿ ನಾಯ್ಕ ಅವರು ಬೊಕಳೆ ಹಳ್ಳಕ್ಕೆ 20 ಲಕ್ಷ ರೂ. ಹಾಗೂ ದೊಡ್ಡಹಳ್ಳದ ಕಾಲು ಸಂಕಕ್ಕೆ 10 ಲಕ್ಷ ರೂ. ಅನುದಾನಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದಾರೆ. ಇನ್ನುಳಿದ 3 ಕಾಲು ಸಂಕವು ಆಗಬೇಕಿದೆ. ದಟ್ಟಕಾಡಿನ ಮಧ್ಯೆ ಇರುವ ಈ 9 ಕುಗ್ರಾಮಗಳ ಜನರು ಯಾವುದೇ ಮೂಲಭೂತ ಅವಶ್ಯಕತೆಗಾಗಿ ಹಟ್ಟಿಕೇರಿಗೆ ಬರಬೇಕು. ರೇಷನ್‌, ಆಸ್ಪತ್ರೆಗಳಿಗೂ ಹಟ್ಟಿಕೇರಿಯೇ ಇವರಿಗೆ ಆಧಾರ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next