Advertisement

ಆಂಧ್ರ : ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಸಾವು 

10:50 AM Jun 24, 2018 | Team Udayavani |

ಕರ್ನೂಲ್‌: ಜಿಲ್ಲೆಯ ಸೋಮಯಾಜುಪಲ್ಲೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ  ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ  9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಅಪಘಾತದ ತೀವ್ರತೆಗೆ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ರಿಕ್ಷಾದಲ್ಲಿ ಮಹಿಳೆಯರು ಮತ್ತು ಅನಾರೋಗ್ಯಕ್ಕೀಡಾದವರು ನಾಟಿ ಔಷಧಿ ತರಲೆಂದು  ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next